ರಾಮನಗರ: ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಪಿಚ್ಚನಕೆರೆ ಬಳಿ ಜ.09ರ ಸಂಜೆ ನಡೆದಿದೆ. ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ.
ಮೃತ ಬಾಲಕಿ ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬವರ ಮಗಳು, ರಕ್ಷಿತಾ (6) ಎಂದು ಗುರುತಿಸಲಾಗಿದೆ.
ರಕ್ಷಿತಾ ಬಿಡದಿ ಬಳಿಯ ರಾಮನಹಳ್ಳಿ ಗೇಟ್ನ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ತರಗತಿಯಲ್ಲಿ ಓದುತ್ತಿದ್ದಳು. ಸಂಜೆ ಶಾಲೆ ಮುಗಿಸಿ ಬಸ್ನಲ್ಲಿ ಮನೆಗೆ ಹಿಂತಿರುಗುವ ವೇಳೆ ಪಿಚ್ಚನಕೆರೆ ಬಳಿ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿಯು ಬಸ್ಸಿನ ಬಾಗಿಲು ಹಾಕಿರಲಿಲ್ಲ. ಚಾಲಕ ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ರಕ್ಷಿತಾ ಜಾರಿ ಕೆಳಗಿ ಬಿದ್ದು ಹಿಂದಿನ ಚಕ್ರ ತಲೆಯ ಮೇಲೆ ಹತ್ತಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಬಸ್ನಿಂದ ವಿದ್ಯಾರ್ಥಿನಿ ಬಿದ್ದು ಮರಣ ಹೊಂದಿದ ಸುದ್ದಿ ತಿಳಿದ ಕೂಡಲೇ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಬಂದು ಬಸ್ ಸಿಬ್ಬಂದಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲಿಮುಟ್ಟಿದ್ದು, ಶಾಲೆಯ ವಿರುದ್ದ ಹಾಗೂ ಸಿಬ್ಬಂದಿ ವಿರುದ್ದ ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…