Featured

ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು – vishwanews24

ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು

ಬೆಳಗಾವಿ : ರಾತ್ರಿ ಮಲಗುವ ವೇಳೆ ಚಳಿಯಿಂದ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದ್ದು. ಮಂಗಳವಾರ ಸಂಜೆ ಪಾಲಕರು ಇವರನ್ನು ಹುಡುಕುತ್ತ ಬಂದಾಗಲೇ ಘಟನೆ ಗೊತ್ತಾಗಿದೆ.

ಮೃತರನ್ನು ಅಮನ್‌ ನಗರದ ನಿವಾಸಿಗಳಾದ ರಿಹಾನ್ ಮತ್ತೆ (22), ಮೋಹಿನ್ ನಾಲಬಂದ (23) ಹಾಗೂ ಸರ್ಫರಾಜ್ ಹರಪ್ಪನಹಳ್ಳಿ (22) ಮೃತಪಟ್ಟವರು. ಇವರೊಂದಿಗೇ ಮಲಗಿದ್ದ ಶಾಹನವಾಜ್ (19) ಎಂಬ ಪ್ರಜ್ಞಾಹೀನವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ಸೇರಿ ಸೋಮವಾರ ಮಧ್ಯಾಹ್ನ ಯಾವುದೋ ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದರು. ರಾತ್ರಿ ಚಳಿ ಹೆಚ್ಚಾಗಿದ್ದರಿಂದ ಮಲಗುವ ಕೋಣೆಯಲ್ಲಿ ಇದ್ದಿಲಿನ ಒಲೆ (ಶೀಗಡಿ)ಯಲ್ಲಿ ಬೆಂಕಿ ಹಾಕಿ ರೂಮಿನಲ್ಲಿ ಇಟ್ಟುಕೊಂಡಿದ್ದರು. ಅದೇ ಒಲೆಯಲ್ಲಿ ನಾಲ್ಕು ಸೊಳ್ಳೆ ನಿರೋಧಕ ಕಾಯಿಲ್‌ಗಳನ್ನು ಹಾಕಿದ್ದು ಗೊತ್ತಾಗಿದೆ.

ಯುವಕರು ಮಲಗಿದ ರೂಮಿಗೆ ಕಿಟಕಿಗಳಿಲ್ಲ. ಬಾಗಿಲನ್ನು ಭದ್ರವಾಗಿ ಹಾಕಿಕೊಂಡಿದ್ದರು. ನಿದ್ರೆಗೆ ಜಾರಿದ ಮೇಲೆ ಕೋಣೆಯ ಒಳಗೆ ಇದ್ದಿಲಿನ ಹೊಗೆ ದಟ್ಟವಾಗಿ ಆವರಿಸಿ, ಉಸಿರಾಟಕ್ಕೆ ಸಮಸ್ಯೆ ಆಗಿದೆ. ಆಕ್ಸಿಜನ್‌ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ನಾಲ್ವರೂ ಅಕ್ಕಪಕ್ಕದ ಮನೆಯವರೇ ಆಗಿದ್ದು, ನಾಲ್ವರ ಪಾಲಕರೂ ಮಂಗಳವಾರ ಸಂಜೆಯವರೆಗೆ ಯಾರನ್ನೂ ಹುಡುಕಾಡಿಲ್ಲ. ಸಂಜೆಗೆ ಮಲಗುವ ಕೋಣೆಯ ಬಾಗಿಲು ಮುರಿದಾಗ ಘಟನೆ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾಸಕ ಆಸಿಫ್‌ ಸೇಠ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತರ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಳಮಾರುತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

16 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

16 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

16 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

16 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

16 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

18 hours ago