Featured

ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು – vishwanews24

ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು

ಬೆಳಗಾವಿ : ರಾತ್ರಿ ಮಲಗುವ ವೇಳೆ ಚಳಿಯಿಂದ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದ್ದು. ಮಂಗಳವಾರ ಸಂಜೆ ಪಾಲಕರು ಇವರನ್ನು ಹುಡುಕುತ್ತ ಬಂದಾಗಲೇ ಘಟನೆ ಗೊತ್ತಾಗಿದೆ.

ಮೃತರನ್ನು ಅಮನ್‌ ನಗರದ ನಿವಾಸಿಗಳಾದ ರಿಹಾನ್ ಮತ್ತೆ (22), ಮೋಹಿನ್ ನಾಲಬಂದ (23) ಹಾಗೂ ಸರ್ಫರಾಜ್ ಹರಪ್ಪನಹಳ್ಳಿ (22) ಮೃತಪಟ್ಟವರು. ಇವರೊಂದಿಗೇ ಮಲಗಿದ್ದ ಶಾಹನವಾಜ್ (19) ಎಂಬ ಪ್ರಜ್ಞಾಹೀನವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ಸೇರಿ ಸೋಮವಾರ ಮಧ್ಯಾಹ್ನ ಯಾವುದೋ ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದರು. ರಾತ್ರಿ ಚಳಿ ಹೆಚ್ಚಾಗಿದ್ದರಿಂದ ಮಲಗುವ ಕೋಣೆಯಲ್ಲಿ ಇದ್ದಿಲಿನ ಒಲೆ (ಶೀಗಡಿ)ಯಲ್ಲಿ ಬೆಂಕಿ ಹಾಕಿ ರೂಮಿನಲ್ಲಿ ಇಟ್ಟುಕೊಂಡಿದ್ದರು. ಅದೇ ಒಲೆಯಲ್ಲಿ ನಾಲ್ಕು ಸೊಳ್ಳೆ ನಿರೋಧಕ ಕಾಯಿಲ್‌ಗಳನ್ನು ಹಾಕಿದ್ದು ಗೊತ್ತಾಗಿದೆ.

ಯುವಕರು ಮಲಗಿದ ರೂಮಿಗೆ ಕಿಟಕಿಗಳಿಲ್ಲ. ಬಾಗಿಲನ್ನು ಭದ್ರವಾಗಿ ಹಾಕಿಕೊಂಡಿದ್ದರು. ನಿದ್ರೆಗೆ ಜಾರಿದ ಮೇಲೆ ಕೋಣೆಯ ಒಳಗೆ ಇದ್ದಿಲಿನ ಹೊಗೆ ದಟ್ಟವಾಗಿ ಆವರಿಸಿ, ಉಸಿರಾಟಕ್ಕೆ ಸಮಸ್ಯೆ ಆಗಿದೆ. ಆಕ್ಸಿಜನ್‌ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ನಾಲ್ವರೂ ಅಕ್ಕಪಕ್ಕದ ಮನೆಯವರೇ ಆಗಿದ್ದು, ನಾಲ್ವರ ಪಾಲಕರೂ ಮಂಗಳವಾರ ಸಂಜೆಯವರೆಗೆ ಯಾರನ್ನೂ ಹುಡುಕಾಡಿಲ್ಲ. ಸಂಜೆಗೆ ಮಲಗುವ ಕೋಣೆಯ ಬಾಗಿಲು ಮುರಿದಾಗ ಘಟನೆ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾಸಕ ಆಸಿಫ್‌ ಸೇಠ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತರ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಳಮಾರುತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

16 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

16 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

17 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

18 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

19 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

19 hours ago