ಜಿಲ್ಲೆ

ಚಾಣಾಕ್ಯನ ನಂತರ ಚಂದ್ರಗುಪ್ತ ರಾಜ್ಯಕ್ಕೆ ಬರಲಿದ್ದಾರೆ, ಅಧಿಕಾರ ನಮ್ಮದೇ : ಈಶ್ವರಪ್ಪ

ರಾಜ್ಯಕ್ಕೆ ಈವರೆಗೂ ಚಾಣಾಕ್ಯ(ಅಮಿತ್ ಷಾ) ಬಂದಿದ್ದರು. ಇನ್ನು ಮುಂದೆ ಚಂದ್ರಗುಪ್ತ(ನರೇಂದ್ರ ಮೋದಿ) ಬರಲಿದ್ದಾರೆ ನೋಡಿ ಎಂದು ಬಿಜೆಪಿ ಮುಖಂಡ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. , ಚುನಾವಣಾ ಚಾಣಾಕ್ಯ ಎನಿಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಈವರೆಗೂ ರಾಜ್ಯಕ್ಕೆ ಬಂದು ಹೋಗಿದ್ದಾರೆ. ಇನ್ನು ಚಂದ್ರಗುಪ್ತ ಎನಿಸಿದ ಪ್ರಧಾನಿ ನರೇಂದ್ರ ಮೋದಿ ಬರುವುದು ಬಾಕಿ ಇದೆ. ಅವರು ಬಂದ ಮೇಲೆ ಇಡೀ ಚುನಾವಣಾ ಕಾವು ಬದಲಾಗಿದೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅಲೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪ್ರಭಾವ ಪಕ್ಷಕ್ಕೆ ಆನೆ ಬಲ ತರಲಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಯಾವ ಸಮೀಕ್ಷೆಗಳು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಹಿಂದೆ ಉತ್ತರ ಪ್ರದೇಶ, ತ್ರಿಪುರ ಸೇರಿದಂತೆ ಅನೇಕ ಕಡೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೆಲವು ಸಮೀಕ್ಷೆಗಳು ಹೇಳಿದರೆ ಇನ್ನು ಕೆಲವು ಸಮೀಕ್ಷೆಗಳು ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದ್ದವು. ಫಲಿತಾಂಶ ಬಂದಾಗ ಎಲ್ಲರೂ ಹುಬ್ಬೇರುವಂತೆ ಎಲ್ಲರೂ ನಮಗೆ ಬಹುಮತ ನೀಡಿದ್ದಾರೆ. ಕರ್ನಾಟಕದಲ್ಲೂ ಇದೇ ಫಲಿತಾಂಶ ಬರಲಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರ ಪಕ್ಷ. ನಾವು ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುತ್ತಿದ್ದೇವೆ. ನಮಗೆ ಮತದಾರರ ನಾಡಿಮಿಡಿತ ಏನೆಂಬುದು ಚೆನ್ನಾಗಿ ತಿಳಿದಿದೆ. ಯಾವುದೋ ಸಮೀಕ್ಷೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

ನಮ್ಮಲ್ಲಿ ಟಕೆಟ್ ಹಂಚಿಕೆಯಾದ ನಂತರ ಸಣ್ಣಪುಟ್ಟ ಗೊಂದಲಗಳು ಉಂಟಾಗಿವೆ. ಅದನ್ನು ಸರಿಪಡಿಸುವಷ್ಟು ಸಾಮಥ್ರ್ಯ ನಮ್ಮಲ್ಲಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬಳಿಕ ಹೇಗೆ ಛಿದ್ರ ಛಿದ್ರವಾಗುತ್ತದೆ ಎಂಬುದನ್ನು ನೀವೇ ನೋಡಿ ಎಂದರು. ಮೊಳಕಾಲ್ಮೂರಿನಲ್ಲಿ ಅನ್ಯ ಪಕ್ಷದವರ ಕೈವಾಡದಿಂದ ನಿನ್ನೆ ಗಲಭೆಯಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಶ್ರೀರಾಮುಲು ಭಾರೀ ಬಹುಮತದ ಅಂತರದಿಂದ ಗೆಲ್ಲಲಿದ್ದಾರೆ. ಟಿಕೆಟ್ ಕೈ ತಪ್ಪಿದಾಗ ಇಂತಹ ಸಣ್ಣಪುಟ್ಟ ಗೊಂದಲಗಳು ಉಂಟಗುವುದು ಸರ್ವೇ ಸಾಮಾನ್ಯ.ನಮಗೆ ಅನೇಕ ಬಾರಿ ಇದರ ಅನುಭವವಾಗಿದೆ ಎಂದು ಈಶ್ವರಪ್ಪ ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago