ಚಾಮರಾಜನಗರ: ಮಹಾಶಿವರಾತ್ರಿ ಪ್ರಯಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಫೆ.17ರ ಬೆಳಿಗ್ಗೆ 6 ಗಂಟೆಯಿಂದ ಇದೇ ತಿಂಗಳ 21ರ ಸಂಜೆ 7 ಗಂಟೆ ವರೆಗೆ ದ್ವಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.ಬೈಕ್ ನಿಲುವುದಕ್ಕೆ ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಜಾತ್ರೆ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬರುವ ಹಿನ್ನೆಲೆ ಅಪಘಾತ ಹಾಗೂ ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಜಿಲ್ಲಾಡಳಿತ ಈ ಆದೇಶವನ್ನು ಹೊರಡಿಸಿದೆ.
ಮಲೆ ಮಾದಪ್ಪನಿಗೆ ಹರಕೆ ಹೊತ್ತ ಸಾವಿರಾರು ಭಕ್ತರು ಶಿವರಾತ್ರಿ ಹಬ್ಬಕ್ಕೆ ನಾಲ್ಕು ದಿನಗಳ ಮುನ್ನ ಬೆಂಗಳೂರು, ಕನಕಪುರ, ನೆಲಮಂಗಲ, ಮಾಗಡಿ, ಸಾತನೂರು, ಹಾರೋಹಳ್ಳಿ, ರಾಮನಗರ ಕಡೆಯಿಂದ ಕಾಲ್ನಡಿಗೆಯಲ್ಲಿ ಪಾದಯಾತ್ರೆ ನಡೆಸಿದ್ದಾರೆ. ಭಕ್ತರು ಬಸವನ ಕಡಲು ಮೂಲಕ ಕಾವೇರಿ ನದಿ ದಾಟಿಕೊಂಡು ದುರ್ಗಮ ಕಾವೇರಿ ವನ್ಯಧಾಮದಲ್ಲಿ ಬರಿಗಾಲಿನಲ್ಲಿ ಬರುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…