ಚಾಮರಾಜನಗರ: ಮಹಾಶಿವರಾತ್ರಿ ಪ್ರಯಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಫೆ.17ರ ಬೆಳಿಗ್ಗೆ 6 ಗಂಟೆಯಿಂದ ಇದೇ ತಿಂಗಳ 21ರ ಸಂಜೆ 7 ಗಂಟೆ ವರೆಗೆ ದ್ವಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.ಬೈಕ್ ನಿಲುವುದಕ್ಕೆ ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಜಾತ್ರೆ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬರುವ ಹಿನ್ನೆಲೆ ಅಪಘಾತ ಹಾಗೂ ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಜಿಲ್ಲಾಡಳಿತ ಈ ಆದೇಶವನ್ನು ಹೊರಡಿಸಿದೆ.
ಮಲೆ ಮಾದಪ್ಪನಿಗೆ ಹರಕೆ ಹೊತ್ತ ಸಾವಿರಾರು ಭಕ್ತರು ಶಿವರಾತ್ರಿ ಹಬ್ಬಕ್ಕೆ ನಾಲ್ಕು ದಿನಗಳ ಮುನ್ನ ಬೆಂಗಳೂರು, ಕನಕಪುರ, ನೆಲಮಂಗಲ, ಮಾಗಡಿ, ಸಾತನೂರು, ಹಾರೋಹಳ್ಳಿ, ರಾಮನಗರ ಕಡೆಯಿಂದ ಕಾಲ್ನಡಿಗೆಯಲ್ಲಿ ಪಾದಯಾತ್ರೆ ನಡೆಸಿದ್ದಾರೆ. ಭಕ್ತರು ಬಸವನ ಕಡಲು ಮೂಲಕ ಕಾವೇರಿ ನದಿ ದಾಟಿಕೊಂಡು ದುರ್ಗಮ ಕಾವೇರಿ ವನ್ಯಧಾಮದಲ್ಲಿ ಬರಿಗಾಲಿನಲ್ಲಿ ಬರುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…