ಬೆಂಗಳೂರು: ಇಂದು 74ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಜ್ಯ ರಾಜಧಾನಿಯ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ. ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದದಲ್ಲಿ ಧ್ವಜಾರೋಹಣ ನೆರವೇರಿಸಿರುವುದು ವಿಶೇಷ. ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ. ಎಂ.ಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಚಾಮರಾಜಪೇಟೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಉಪಸ್ಥಿತಿ ಇದ್ದರು.
ಇನ್ನು, ಧ್ವಜಾರೋಹಣ ಬಳಿಕ ರಾಷ್ಟಗೀತೆ, ನಾಡಗೀತೆಯನ್ನು ನುಡಿಸಲಾಯ್ತು. ಶ್ರೀರಾಮ ಸೇನೆ,ಹಾಗೂ ಚಾಮರಾಜ ನಾಗರಿಕರ ಒಕ್ಕೂಟ ಸಹ 74ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಈ ವೇಳೆ ಮೈದಾನದಲ್ಲಿ ರೈತಗೀತೆ ಸಿರಿನಾದ ಸಹ ಕೇಳಿಬಂದಿದ್ದು, ಸನಾತನ ಹಿಂದೂಧರ್ಮಕ್ಕೆ ಜೈಕಾರ ಹಾಕಲಾಗಿದೆ.
ಚಾಮರಾಜಪೇಟೆ ನಾಗರೀಕರು ಭಾರತಮಾತೆಗೆ ಜೈಕಾರ ಕೂಗಿದ್ದು, ಪೊಲೀಸ್ ಭದ್ರತೆಯಲ್ಲಿ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ. ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್, ಶಾಸಕ ಜಮೀರ್ ಅಹಮದ್ ಧ್ವಜಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಈ ಮಧ್ಯೆ, ಚಾಮರಾಜಪೇಟೆ ಮೈದಾನದಲ್ಲಿ ಮಕ್ಕಳ ಕಾರ್ಯಕ್ರಮ ಸಹ ನಡೆಯುತ್ತಿದ್ದು, ಬಾಲಕಿಯರ ಪ್ರೌಢಶಾಲೆ ಮಕ್ಕಳು ಹೂಪ್ಸ್ ಪ್ರದರ್ಶನ ನೀಡುತ್ತಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…