Featured

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಣೆ – Vishwanews24

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಇಂದು 74ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಜ್ಯ ರಾಜಧಾನಿಯ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ. ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದದಲ್ಲಿ ಧ್ವಜಾರೋಹಣ ನೆರವೇರಿಸಿರುವುದು ವಿಶೇಷ. ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ. ಎಂ.ಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಚಾಮರಾಜಪೇಟೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿಸಿ‌‌ ಮೋಹನ್, ಚಾಮರಾಜಪೇಟೆ ಶಾಸಕ ಜಮೀರ್‌ ಅಹ್ಮದ್ ಖಾನ್ ಉಪಸ್ಥಿತಿ ಇದ್ದರು.

ಇನ್ನು, ಧ್ವಜಾರೋಹಣ ಬಳಿಕ ರಾಷ್ಟಗೀತೆ, ನಾಡಗೀತೆಯನ್ನು ನುಡಿಸಲಾಯ್ತು. ಶ್ರೀರಾಮ ಸೇನೆ,ಹಾಗೂ ಚಾಮರಾಜ ನಾಗರಿಕರ ಒಕ್ಕೂಟ ಸಹ 74ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಈ ವೇಳೆ ಮೈದಾನದಲ್ಲಿ‌ ರೈತಗೀತೆ ಸಿರಿನಾದ ಸಹ ಕೇಳಿಬಂದಿದ್ದು, ಸನಾತನ ಹಿಂದೂಧರ್ಮಕ್ಕೆ ಜೈಕಾರ ಹಾಕಲಾಗಿದೆ.

ಚಾಮರಾಜಪೇಟೆ ನಾಗರೀಕರು ಭಾರತಮಾತೆಗೆ ಜೈಕಾರ ಕೂಗಿದ್ದು, ಪೊಲೀಸ್ ಭದ್ರತೆಯಲ್ಲಿ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ. ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್, ಶಾಸಕ ಜಮೀರ್ ಅಹಮದ್ ಧ್ವಜಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ಈ ಮಧ್ಯೆ, ಚಾಮರಾಜಪೇಟೆ ಮೈದಾನದಲ್ಲಿ‌ ಮಕ್ಕಳ ಕಾರ್ಯಕ್ರಮ ಸಹ ನಡೆಯುತ್ತಿದ್ದು, ಬಾಲಕಿಯರ ಪ್ರೌಢಶಾಲೆ ಮಕ್ಕಳು ಹೂಪ್ಸ್ ಪ್ರದರ್ಶನ ನೀಡುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago