ದಕ್ಷಿಣ ಕನ್ನಡ

ಚಾರ್ಮಾಡಿ ಗುಡ್ಡ ಕುಸಿತ; ಬರಿಗಾಲಿನಲ್ಲಿ ಪ್ರಯಾಣಿಕರ ನೆರವಿಗೆ ನಿಂತ ಎಸ್ಪಿ ಅಣ್ಣಾಮಲೈ, ಶಾಸಕ ಹರೀಶ್ ಪೂಂಜ,ಇನ್ಸ್‌ಪೆಕ್ಟರ್ ಸಂದೇಶ್!

ಮಂಗಳೂರು: ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿದ ಪರಿಣಾಂ ಸಂಚಾರಕ್ಕೆ ಧಕ್ಕೆಯಾಗಿ ಸಂಕಷ್ಟದಲ್ಲಿದ್ದ ಪ್ರಯಾಣಿಕರ ನೆರವಿಗೆ ನಿಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ, ಹಾಗೂ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸಂದೇಶ್ ಅವರಿಗೆ ಸಾರ್ವಜನಿಕ ವಲಯದಿಂದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಭೂಕುಸಿತ ಆಗಿದ್ದರಿಂದ ಎರಡೂ ಕಡೆಯಿಂದ ವಾಹನ ಸಂಚಾರ ಬಂದ್ ಆಗಿತ್ತು. ಈ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಎಲ್ಲಾ ವಾಹನಗಳು ಸುಮಾರು ಮೂರು ಕಿಮೀ ಉದ್ದಕ್ಕೆ ಸಾಲುಗಟ್ಟಿ ನಿಂತಲ್ಲಿಯೇ ಸಿಲುಕಿಕೊಂಡಿದ್ದವು.

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಉಭಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯಿತು. ಅಗ್ನಿ ಶಾಮಕ ಸಿಬ್ಬಂದಿ, ಹೆದ್ದಾರಿ ಪ್ರಾಧಿಕಾರ, ಪೊಲೀಸರು, ಸ್ವಯಂಸೇವಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ನಸುಕಿನಿಂದಲೇ ಹರಸಾಹಸಪಟ್ಟು ಮಧ್ಯಾಹ್ನ 2 ಗಂಟೆ ಹೊತ್ತಿಗೆ ಮಣ್ಣಿನ ರಾಶಿ, ಮರಗಳನ್ನು ತೆರವುಗೊಳಿಸಿದರು. ಭಾರಿ ಮಳೆಯ ನಡುವೆ, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಸುಮಾರು 25 ಅಡಿಯಷ್ಟು ಎತ್ತರದ ಮಣ್ಣಿನ ರಾಶಿಯನ್ನು ಜೆಸಿಬಿ ಯಂತ್ರಗಳಿಂದ ತೆರವುಗೊಳಿಸಲಾಯಿತು.

ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಅವರು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಸ್ಥಳದಲ್ಲಿ ಮೊಕ್ಕಾಂ ಹೂಡಿ ಕಾರ್ಯಾಚರಣೆಯ ನಿಗಾ ವಹಿಸಿದರು. ನೀರಿನಲ್ಲಿ ಬೂಟು ಕಳಚಿ ಬಿದ್ದರೂ ಅದನ್ನು ಲೆಕ್ಕಿಸದೆ ಬರಿಗಾಲಿನಲ್ಲಿಯೇ ಸಂಚರಿಸಿದರು. ಬಸ್ಸೊಂದನ್ನು ತಳ್ಳಲು ಸ್ವತಃ ಕೈಚಾಚಿ ನೆರವಾದರು.

ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ, ಚಾರ್ಮಾಡಿಯ ಸಮಾಜ ಸೇವಕ ಚಾರ್ಮಾಡಿ ಹಸನಬ್ಬ, ಹಾಗೂ ಅನೇಕ ಸ್ಥಳೀಯರು ಪ್ರಯಾಣಿಕರಿಗೆ ಹಾಲು, ಬಾಳೆಹಣ್ಣು, ಪಾನೀಯ, ಬಿಸ್ಕಿಟ್, ಊಟ, ಕುಡಿಯುವ ನೀರು ನೀಡಿ ಮಾನವೀಯತೆ ಮೆರೆದರು.

ಅಗತ್ಯ ಇದ್ದವರಿಗೆ ಔಷಧ ಒದಗಿಸಲಾಯಿತು. ಅಸ್ವಸ್ಥಗೊಂಡಿದ್ದ ಇಬ್ಬರನ್ನು ಬೆಳ್ತಂಗಡಿ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಒಯ್ಯಲಾಯಿತು. ದಕ್ಷಿಣ ಕನ್ನಡದ ಸಂಸದ ನಳಿನ್‌ಕುಮಾರ್‌ ಕಟೀಲ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

‘ಚಾರ್ಮಾಡಿ ಘಾಟ್‌ನಲ್ಲಿ 13 ಕಡೆ ಗುಡ್ಡ ಕುಸಿತದಿಂದ ರಸ್ತೆ ಮಾರ್ಗ ಬಂದ್‌ ಆಗಿದೆ. ಹಾಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೂ ಈ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ(ಎಸ್‌ಪಿ) ಅಣ್ಣಾಮಲೈ ತಿಳಿಸಿದ್ದಾರೆ.

ಮಳೆಯಿಂದ ಮತ್ತಷ್ಟು ಮರ, ಗುಡ್ಡಗಳು ಕುಸಿದು ಬೀಳುವ ಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ನಮಗೆ 48 ಗಂಟೆಗೆ ಸಮಯ ಕೊಡಿ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲಾಡಳಿತದ ನೆರವಿಂದ ಎಲ್ಲವನ್ನೂ ತೆರವುಗೊಳಿಸ್ತೇವೆ ಎಂದು ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಹೇಳಿದ್ದಾರೆ.

ಕುಸಿದಿರುವ ಮಣ್ಣನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆ ಮತ್ತು ಹೆದ್ದಾರಿ ಪ್ರಾಧಿಕಾರದ ಕಾರ್ಮಿಕರು ಶ್ರಮಿಸುತ್ತಿದ್ದಾರೆ.

ರಸ್ತೆಯಲ್ಲಿ ನಿಂತಿರುವ ವಾಹನಗಳನ್ನು ಘಾಟ್‌ನಿಂದ ಹೊರತರುವ ಕಾರ್ಯ ನಡೆಯುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳು, ಸ್ವಯಂಸೇವಕರು ಪ್ರಯಾಣಿಕರಿಗೆ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿದ್ದಾರೆ. ಈ ಮಾರ್ಗದ ಬದಲಾಗಿ ಕುದುರೆಮುಖ ಮತ್ತು ಕಾರ್ಕಳ ಮಾರ್ಗ ಬಳಸಲು ಎಸ್‌ಪಿ ಅವರು ಸೂಚಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago