Featured

ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು : ನೂರಾರು ಎಕರೆ ಅರಣ್ಯ ನಾಶ – vishwanews24

ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು : ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು :ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ, ಅಪರೂಪದ ಶೋಲಾ ಕಾಡು ಸುಟ್ಟು ಕರಕಲಾಗಿದೆ.

ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಅರಣ್ಯಕ್ಕೆ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ.ಕಳೆದ ವಾರವಷ್ಟೇ ಚಾರ್ಮಾಡಿ ಘಾಟಿಯ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚಿಗೆ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಕಳೆದ ರಾತ್ರಿ ಮತ್ತೆ ಚಾರ್ಮಾಡಿ ತಪ್ಪಲಿನ ಅರಣ್ಯಕ್ಕೆ ಬೆಂಕಿ ಬಿದ್ದು ಮತ್ತೆ ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ರಸ್ತೆಬದಿ ಇದ್ದ ಬೆಂಕಿಯನ್ನು ನಂದಿಸಿದ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಏರಿ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಬೆಂಕಿಯ ಕೆನ್ನಾಲಿಗೆ 10 ಕಿಲೋ ಮೀಟರ್‌ನಷ್ಟು ದೂರಕ್ಕೆ ಬೆಂಕಿ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

5 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

5 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

6 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

6 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

7 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

7 hours ago