ಮಂಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘುವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಿ ಭಾರೀ ವಾಹನಗಳ ಸಂಚಾರ ನಿಷೇಧ ವಿಸ್ತರಿಸಿ ನವೆಂಬರ್ 27ರ ಬುಧವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 28ರಿಂದ ದಿನದ 24 ಗಂಟೆಗಳಲ್ಲಿಯೂ ಈ ರಸ್ತೆಯಲ್ಲಿ ಲಘ ವಾಹನಗಳಿಗೆ ಸಂಚಾರ ಮಾಡಬಹುದು. ಆದರೆ ಘನ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದ್ದು ಈ ಆದೇಶ ಮುಂದಿನ ಆದೇಶದವರೆಗೂ ಜಾರಿಯಲ್ಲಿರುತ್ತದೆ.
ನಿರಂತರವಾಗಿ ಸುರಿದ ಮಳೆಯ ಪರಿಣಾಮದಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದವು. ಸೆಪ್ಟೆಂಬರ್ 15ರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು-ವಿಲ್ಲಪುರಂ ರಸ್ತೆಯ 76ಕಿ.ಮೀ.ನಿಂದ 86ಕಿ.ಮೀವರೆಗಿನ ರಸ್ತೆಯ ಮಾರ್ಗದಲ್ಲಿ ಲಘು ವಾಹನಗಳಿಗೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚಾರಕ್ಕೆ ಅವಕಾಶ ನೀಡಿ ಘನ ವಾಹನಗಳ ಸಂಚಾರವನ್ನು ನಿಷೇಧ ಮಾಡಿತ್ತು. ಈ ಆದೇಶವನ್ನು ಮಾರ್ಪಾಡು ಮಾಡಿದ್ದು, ಲಘು ವಾಹನಗಲೀಗೆ ದಿನದ 24 ಗಂಟೆಗಳ ಕಾಲವು ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿ ಘನ ವಾಹನ ಸಂಚಾರಕ್ಕೆ ಹೇರಲಾಗಿದ್ದ ನಿಷೇಧವನ್ನು ಮುಂದುವರಿಸಲಾಗಿದೆ.
ಲಘು ವಾಹನಗಳಾದ ಕಾರು, ಜೀಪು, ವ್ಯಾನ್, ಮಿನಿವ್ಯಾನ್, ದ್ವಿಚಕ್ರ ವಾಹನ ಮತ್ತು ಆಂಬುಲೆನ್ಸ್ಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಲ್ಟಿ ಎಕ್ಸೆಲ್ ಟ್ರಕ್, ಟ್ಯಾಂಕರ್ಸ್, ಲಾಂಗ್ ಚಾಸೀಸ್, ಸಾರ್ವಜನಿಕರು ಸಂಚರಿಸುವ ಬಸ್ಗಳು, ಹೆವಿ ಕಮರ್ಷಿಯಲ್ ವಾಹನಗಳು, ಶಿಪ್ ಕಾರ್ಗೊ ಕಂಟೈನರ್, ರಾಜಹಂಸ ಮತ್ತು ಅಧಿಕ ಬಾರದ ಸರಕು ಸಾಗಾಟ ಮಾಡುವ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…