ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟ್ ಸುತ್ತಮುತ್ತ ಧಾರಾಕಾರ ಮಳೆಯಾಗಿ ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಕುಸಿತ ಕಂಡಿರುವುದರಿಂದ 2 ದಿನಗಳ ಕಾಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಮಾಡಿದ್ದಾರೆ.
ರಸ್ತೆಗೆ ಕುಸಿದು ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಇನ್ನು ಕರಾವಳಿ ಕಡೆಗೆ ಸಂಚರಿಸುವ ವಾಹನಗಳನ್ನು ಕೊಟ್ಟಿಗೆಹಾರದಲ್ಲಿ ತಡೆಯಲಾಗಿದ್ದು ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುತ್ತಿದೆ.
ಚಾರ್ಮಾಡಿ ಘಾಟ್ ರಸ್ತೆಯ ನಾಲ್ಕೈದು ಕಡೆಗಳಲ್ಲಿ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ.
ವಿಷಯ ತಿಳಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಬೆಳ್ತಂಗಡಿ ತಹಸೀಲ್ದಾರ್ ಗಣಪತಿ ಶಾಸ್ತ್ರೀ, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಎಸ್ ಐ ಅವಿನಾಶ್, ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ಮಂಗಳವಾರ ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…