ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಶಾಲಾ ವಾಹನ : 9 ಮಕ್ಕಳ ದುರ್ಮರಣ -Vishwanews24

Featured, ರಾಷ್ಟ್ರ ನ್ಯೂಸ್

ಉತ್ತರಾಖಂಡ : ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಶಾಲಾ ವಾಹನ  ,ಪರಿಣಾಮ ಸ್ಥಳದಲ್ಲಿಯೇ 9 ಮಕ್ಕಳು ದುರ್ಮರಣಕ್ಕೀಡಾಗಿ, ಇತರೆ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಉತ್ತರಾಖಂಡ್ ನ ಕಂಗ್ಸಾಲಿ ಬಳಿಯ ತೆಹ್ರಿ ಗ್ರಹವಾಲ್ ಬಳಿ ನಡೆಸಿದೆ.

ಶಾಲಾ ವಾಹನದಲ್ಲಿ ಒಟ್ಟು 18 ಮಕ್ಕಳು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆಯಲ್ಲಿ ಸ್ಕಿಡ್​ ಆಗಿ ಆಳವಾದ ಕಂದಕಕ್ಕೆ ಉರುಳಿದೆ. ಸ್ಥಳದಲ್ಲೇ 9 ಮಕ್ಕಳು ಸಾವಿಗೀಡಾಗಿದ್ದು, ಉಳಿದವರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಗರ್ವಾಲ್​ನ​​ ಇನ್ಸ್‌ಪೆಕ್ಟರ್ ಜನರಲ್ ಆಫ್​ ಪೊಲೀಸ್ ಅಜಯ್​ ರೌಟೇಲಾ 9 ಮಕ್ಕಳು ಮೃತರಾಗಿವ ಮಾಹಿತಿಯನ್ನು ಖಚಿತಪಡಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಗರ್ವಾಲ್ ನ ಐಜಿಪಿ ಅಜಯ್ ರೌಟೇಲಾ, ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 9 ಮಕ್ಕಳು ಮೃತರಾಗಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.