ರಾಜಸ್ಥಾನ: ಟ್ರಕ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ತಕ್ಷಣ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ಕಾರಿನಲ್ಲಿದ್ದ 7 ಜನ ಸಜೀವದಹನವಾಗಿರುವ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಮೃತರನ್ನು ನೀಲಂ ಗೋಯಲ್ (55), ಅವರ ಮಗ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಮಗ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ರಾಜಸ್ಥಾನದ ಸಲಾಸರ್ ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಚುರು ಕಡೆಗೆ ಹೋಗುತ್ತಿದ್ದ ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದ. ಈ ವೇಳೆ ಎದುರಿನಿಂದ ಇನ್ನೊಂದು ವಾಹನ ಬಂದಿದ್ದು, ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್ಪಿಜಿ ಕಿಟ್ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಟ್ರಕ್ ನಲ್ಲಿ ತುಂಬಿದ್ದ ಹತ್ತಿ ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಸಂದರ್ಭ ಸ್ಥಳದಲ್ಲಿದ್ದವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಕಾರು ಬೀಗ ಹಾಕಿದ್ದ ಬಾಗಿಲು ತೆರೆಯಲು ಸಾಧ್ಯವಾಗದೆ ಕಾರಿನಲ್ಲಿದ್ದ ಪ್ರಯಾಣಿಕರು ಸಜೀವವಾಗಿ ದಹನವಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…