ರಾಜಸ್ಥಾನ: ಟ್ರಕ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ತಕ್ಷಣ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ಕಾರಿನಲ್ಲಿದ್ದ 7 ಜನ ಸಜೀವದಹನವಾಗಿರುವ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಮೃತರನ್ನು ನೀಲಂ ಗೋಯಲ್ (55), ಅವರ ಮಗ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಮಗ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ರಾಜಸ್ಥಾನದ ಸಲಾಸರ್ ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಚುರು ಕಡೆಗೆ ಹೋಗುತ್ತಿದ್ದ ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದ. ಈ ವೇಳೆ ಎದುರಿನಿಂದ ಇನ್ನೊಂದು ವಾಹನ ಬಂದಿದ್ದು, ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್ಪಿಜಿ ಕಿಟ್ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಟ್ರಕ್ ನಲ್ಲಿ ತುಂಬಿದ್ದ ಹತ್ತಿ ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಸಂದರ್ಭ ಸ್ಥಳದಲ್ಲಿದ್ದವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಕಾರು ಬೀಗ ಹಾಕಿದ್ದ ಬಾಗಿಲು ತೆರೆಯಲು ಸಾಧ್ಯವಾಗದೆ ಕಾರಿನಲ್ಲಿದ್ದ ಪ್ರಯಾಣಿಕರು ಸಜೀವವಾಗಿ ದಹನವಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…