ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮೂವರು ಸಾವು – vishwanews24
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮೂವರು ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಮೃತರನ್ನು ಅಭಿಷೇಕ್ ಸಾವಂತ್ (23) ವಿಜಯಕುಮಾರ್ ಔರಂಗಾಬಾದ್ ( 24) ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದು, ಮರಳಿ ಬರುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮಹಿಳೆ – vishwanews24
