ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಒಟ್ಟು ನಾಲ್ವರು ಪ್ರಯಾಣಿಕರ ಪೈಕಿ ಕಾರು ಮಾಲೀಕ ಫಯಾಜ್ ಸಾವು, ನಯಾಜ್ ರಕ್ಷಣೆ ಮಾಡಲಾಗಿದ್ದು, ಅಸ್ಲಂಪಾಷಾ, ಪೀರ್ಖಾನ್ಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಮಂಡ್ಯದ ಹಾಲಹಳ್ಳಿ ಸ್ಲಂ ನಿವಾಸಿಗಳು. ಘಟನಾ ಸ್ಥಳಕ್ಕೆ ಮಂಡ್ಯ ಡಿಸಿ ಡಾ.ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪಾಂಡವಪುರದಿಂದ ಮಂಡ್ಯಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ. ವಿಸಿ ನಾಲೆಗೆ ತಡೆಗೋಡೆ ಇಲ್ಲದ ಹಿನ್ನೆಲೆ ಕಾರು ಬಿದ್ದಿದೆ ಎನ್ನಲಾಗುತ್ತಿದೆ. ಸದ್ಯ ಶಿವಳ್ಳಿ ಠಾಣೆ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದು, ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ನೀರಿನ ರಭಸಕ್ಕೆ ಕಾರು ಮುಳುಗಡೆಯಾಗಿದೆ. ಅಪಾರ ನೀರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ.
ಇನ್ನು ತಡೆಗೋಡೆ ಇಲ್ಲದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ವಿಸಿ ನಾಲೆಗೆ ಕಾರು, ಬಸ್ ಬೀಳ್ಳುತ್ತಿವೆ. ಹೀಗಿದ್ದರೂ ತಡೆಗೋಡೆ ಮಾತ್ರ ಹಾಕುತ್ತಿಲ್ಲ. ಜನರ ಪ್ರಾಣಕ್ಕೆ ಇವರ ಬಳಿ ಬೆಲೆ ಇಲ್ಲ ಎಂದು ಸರ್ಕಾರಕ್ಕೆ ಜನರು ಇಡಿ ಶಾಪ ಹಾಕುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…