ಬೆಂಗಳೂರು: ಹೃದಯಾಘಾತಕ್ಕೊಳಗಾದ ಯುವಕನಿಗೆ ಚಿಕಿತ್ಸೆ ಕೊಡಿಸದೆ ಮಾರ್ಗ ಮಧ್ಯೆದಲ್ಲೇ ಆತನ ಸಾವಿಗೆ ಕಾರಣರಾದ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ.
ವಿಧಾನಸಭೆಯಲ್ಲಿ ನಿನ್ನೆ ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಹೃದಯಾಘಾತಕ್ಕೊಳಗಾದ ಯುವಕನಿಗೆ ಚಿಕಿತ್ಸೆ ಕೊಡಿಸದೆ ಮಾರ್ಗ ಮಧ್ಯೆದಲ್ಲೇ ಆತನ ಸಾವಿಗೆ ಕಾರಣರಾದ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಶೂನ್ಯ ವೇಳೆಯಲ್ಲಿ ಶಾಸಕ ಉಮಾನಾಥ್ ಕೊಟ್ಯಾನ್ ಅವರು ವಿಷಯ ಪ್ರಸ್ತಾಪಿಸಿ, ಮಾರ್ಚ್ 7 ರಂದು ಸುಹಾನ್ ಎಂಬ 22 ವರ್ಷದ ಇಂಜನಿಯರಿಂಗ್ ವಿದ್ಯಾರ್ಥಿ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುವ ದುರ್ಗಾಂಬ ಟ್ರಾವೆಲ್ಸ್ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಸಕಲೇಶಪುರ ಬಳಿ ಬರುತ್ತಿದ್ದಂತೆ ಆತನಿಗೆ ಎದೆ ನೋವು ಕಾಣಿಸಿಕೊಳ್ಳುತ್ತದೆ. ಆತ ತಕ್ಷಣ ನಿರ್ವಾಹಕರಿಗೆ ವಿಷಯ ತಿಳಿಸುತ್ತಾನೆ. ಆದರೆ, ಪೈಪೋಟಿಯಲ್ಲಿದ್ದ ಚಾಲಕ ಮತ್ತು ನಿರ್ವಾಹಕರು ಬಸ್ ನಿಲ್ಲಿಸುವುದಿಲ್ಲ. ಇನ್ನು ಸ್ವಲ್ಪ ದೂರ ಬಂದಾಗ ಎದೆ ನೋವು ಜೋರಾಗುತ್ತದೆ. ಆಗಲೂ ಬಸ್ ನಿಲ್ಲಿಸುವಂತೆ ಯುವಕ ಮನವಿ ಮಾಡಿಕೊಳ್ಳುತ್ತಾನೆ. ಆದರೆ, ಸಿಬ್ಬಂದಿ ಕೇಳುವುದಿಲ್ಲ. ಕೊನೆಗೆ ಮಾರ್ಗ ಮಧ್ಯದಲ್ಲೇ ಯುವಕ ಬಸ್ನಲ್ಲೇ ಪ್ರಾಣ ಕಳೆದುಕೊಳ್ಳುತ್ತಾನೆ.
ಯುವಕನ ತಾಯಿಯ ರೋಧನೆ ಕೇಳಲಾಗುತ್ತಿಲ್ಲ. ಖಾಸಗಿ ಬಸ್ಗಳು ವೇಗದ ಪೈಪೋಟಿಗಿಳಿದು ಮಧುಮೇಹಿಗಳು ಮೂತ್ರ ವಿಸರ್ಜನೆ ಮಾಡಬೇಕೆಂದರೂ ಬಸ್ ನಿಲ್ಲಿಸುತ್ತಿಲ್ಲ. ಈ ರೀತಿಯ ಖಾಸಗಿ ಬಸ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು, ಬಸ್ ನಿಲ್ಲಿಸದೆ ಯುವಕನ ಪ್ರಾಣ ಹಾನಿಗೆ ಕಾರಣರಾಗಿದ್ದರೆ ಅದು ಅಪರಾಧ. ಸಾರಿಗೆ ಸಚಿವರಿಂದ ಪ್ರಕರಣದ ಬಗ್ಗೆ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…