Featured

ಚಾಲೆಂಜಿಂಗ್ ಸ್ಟಾರ್ ಕಾರು ಅಪಘಾತ : ದರ್ಶನ್ ಮುಂಗೈ ಮುರಿತ

ಮೈಸೂರುಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಅವರಿದ್ದ ಕಾರು ಅಪಘಾತ ನಡೆದ ಪ್ರಕರಣ ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ. ದರ್ಶನ್ ಕೈ ಗೆ ಗಂಭೀರ ಗಾಯವಾಗಿದ್ದು, ದರ್ಶನ್ ಮತ್ತು ಪ್ರಜ್ವಲ್ ದೇವರಾಜ್ ಸಣ್ಣಪುಟ್ಟ ಗಾಯವಾಗಿದ್ದು ಮೈಸೂರಿನ ಏಷಿಯಾ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಮೈಸೂರಿನಲ್ಲಿ ಪ್ರಾಣಿಗಳ ದತ್ತು ಪಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ನಟರು ಕಾರಿನಲ್ಲಿ ಬೆಂಗಳೂರಿಗೆ ಮರಳುವ ಸಂದರ್ಭ ಮೈಸೂರು ಹಿನಕಲ್ ರಸ್ತೆಯ ಬಳಿ ಸ್ಕಿಡ್ ಆಗಿ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎನ್ನಲಾಗಿದೆ.

ದರ್ಶನ  ಬಲಗೈ ಮೂಳೆ  ಮುರಿತವಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ವರದಿಯಾಗಿದೆ.

ದರ್ಶನ್ ಮೈಸೂರಿನ ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ, ಬಂಧುಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಬೆಳಗ್ಗೆ ಮೂರು ಗಂಟೆಗೆ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಘಟನೆ ನಡೆದಿದೆ.

ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ ತಡರಾತ್ರಿ ಖಾಸಗೀ ಹೊಟೇಲ್ ನಿಂದ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ನಟ ದೇವರಾಜ್ ಹಾಗೂ ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಮತ್ತೋರ್ವ ಸ್ನೇಹಿತನಿಗೂ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.

ದರ್ಶನ್ ಅವರ ಕೈ ಮುರಿದ ಪರಿಣಾಮ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ನಟ ದೇವರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಜ್ವಲ್ ದೇವರಾಜ್ ಅವರಿಗೆ ಕುತ್ತಿಗೆ ಭಾಗಕ್ಕೆ ಏಟಾಗಿದೆ. ಅವರನ್ನೂ ಕೂಡ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸುದ್ದಿ ತಿಳಿದು ಸಾಕಷ್ಟು ಅಭಿಮಾನಿಗಳು ಆಗಮಿಸಿದ್ದು,  ಆಸ್ಪತ್ರೆ ಸುತ್ತ ಪೊಲೀಸರು ಬಿಗು ಭದ್ರತೆ ಒದಗಿಸಿದ್ದಾರೆ.

ಜಾಹಿರಾತು

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago