Featured

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ

ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ.

ಮಾರುಕಟ್ಟೆಯ ಮಾಹಿತಿ ಪ್ರಕಾರ, ಚರ್ಮವಿಲ್ಲದ ಬಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ  ಚಿಕನ್ ಪ್ರತಿ ಕೆಜಿಗೆ 340 ರೂಪಾಯಿಗೆ ಮಾರಾಟವಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ 300 ರೂಪಾಯಿ ಆಸುಪಾಸಿನಲ್ಲಿದ್ದ ಚಿಕನ್ ಬೆಲೆ ಈಗ 350ರಿಂದ 360 ರೂಪಾಯಿವರೆಗೆ ಏರಿಕೆಯಾಗಿದೆ.

ಮೊಟ್ಟೆ ದರವೂ ಇದೇ ರೀತಿ ಏರಿಕೆ ಕಂಡಿದೆ. ಸಗಟು ಮಾರುಕಟ್ಟೆಯಲ್ಲಿ ಒಂದು ಮೊಟ್ಟೆ 8 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 8.30 ರಿಂದ 9 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಮೂರು ದಿನಗಳ ಹಿಂದಷ್ಟೇ 7ರಿಂದ 7.50 ರೂಪಾಯಿ ಇದ್ದ ಮೊಟ್ಟೆ ಬೆಲೆ ಈಗ 9 ರೂಪಾಯಿಗೆ ತಲುಪಿರುವುದು ಗ್ರಾಹಕರಿಗೆ ಹೆಚ್ಚುವರಿ ಹೊರೆ ತಂದಿದೆ.

ವ್ಯಾಪಾರಿಗಳ ಪ್ರಕಾರ, ಈ ಬಾರಿ ಕೋಳಿಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಹಾಗೂ ಬೇರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕೋಳಿ ಪೂರೈಕೆಯಾಗುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾಗಿದೆ. ಇದರಿಂದ ಚಿಕನ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಅವರು ಹೇಳುತ್ತಾರೆ.

ಬೆಲೆ ಏರಿಕೆಯ ಪರಿಣಾಮ ಗ್ರಾಹಕರ ಖರೀದಿ ಪ್ರಮಾಣದಲ್ಲೂ ಬದಲಾವಣೆ ಕಂಡುಬಂದಿದೆ. ಈ ಹಿಂದೆ ಒಂದು ಕೆಜಿ ಚಿಕನ್ ಖರೀದಿಸುತ್ತಿದ್ದವರು ಈಗ 500 ಅಥವಾ 750 ಗ್ರಾಂ ಮಾತ್ರ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಹೆಚ್ಚಿದ ದರದ ಕಾರಣ ಗ್ರಾಹಕರ ಸಂಖ್ಯೆ ಕೂಡ ಕಡಿಮೆಯಾಗಿದೆ ಎನ್ನಲಾಗಿದೆ.

 

Vishwa News 24

Recent Posts

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

11 minutes ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

59 minutes ago

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ – vishwanews24

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ…

1 hour ago

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರಲು ಮುಂದಾದ ರಾಜ್ಯ ಸರಕಾರ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಸಂವಿಧಾನ ಬಾಹಿರವಾಗಿ ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರಲು…

1 hour ago

ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು – vishwanews24

ಮಂಗಳೂರು: ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಮಂಗಳೂರಿನಲ್ಲಿ ಕೆಲಸಕ್ಕೆ ಬಾಂಗ್ಲಾದೇಶದ ಪ್ರಜೆಗಳನ್ನು…

3 hours ago

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ ;  ಐವರ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ ;  ಐವರ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ : ದಿಡುಪೆಯ ಜಲಪಾತದಲ್ಲಿ ನಡೆದ…

3 hours ago