ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.
ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…