ಬೆಂಗಳೂರು : ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
“ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವೆ” ಎಂದು ಅವರು ಬರೆದು ಕೊಂಡಿದ್ದಾರೆ.
ಸಿದ್ದರಾಮಯಯ್ಯ ತಮ್ಮ ಟ್ವೀಟ್ ನಲ್ಲಿ ರಾಜ್ಯ ಸರ್ಕಾರವನ್ನು ಆರೋಪಿಸಿದ್ದು, ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಅವರು ಪ್ರಶ್ನಿಸಿದ್ದಾರೆ.
“ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪನವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]