Featured

ಚಿಕ್ಕಮಗಳೂರು :ಅಂಬೇಡ್ಕರ್ ವೃತ್ತದ ನಾಮಫಲಕ ತೆರವು ; ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳಿಂದ ನಗರಸಭಾ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ – Vishwanews24

ಚಿಕ್ಕಮಗಳೂರು :ಅಂಬೇಡ್ಕರ್ ವೃತ್ತದ ನಾಮಫಲಕ ತೆರವು ; ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳಿಂದ ನಗರಸಭಾ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ – Vishwanews24

ಚಿಕ್ಕಮಗಳೂರು, : ನಗರದ ಉಂಡೇದಾಸರಹಳ್ಳಿಯಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ವೃತ್ತದ ನಾಮಫಲಕವನ್ನು ನಗರಸಭಾ ಪೌರಾಯುಕ್ತರು ರಾತ್ರಿ ಸಮಯದಲ್ಲಿ ತೆರವುಗೊಳಿಸಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳು ನಗರಸಭಾ ಕಛೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಗ್ರಾಮದ ನಿವಾಸಿ ಹೊನ್ನೇಶ್ ಅಂಬೇಡ್ಕರ್ ಪರ ಎನ್ನುವ ನಗರಸಭಾ ಪೌರಾಯುಕ್ತರು ಕೇವಲ ಮೇಲ್ನೋಟಕ್ಕೆ ಮಾತ್ರ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಅಂಬೇಡ್ಕರ್ ವಿರೋಧಿಯಾಗಿ ಕೆಲಸ ಮಾಡುತ್ತಿರುವುದು ಉಂಡೇದಾಸರಹಳ್ಳಿ ನಾಮಫಲಕವನ್ನು ತೆರವುಗೊಳಿಸಿರು ವುದೇ ಸಾಕ್ಷಿಯಾಗಿದೆ ಎಂದು ದೂರಿದರು.

ಉಂಡೇದಾಸರಹಳ್ಳಿಯ ಗ್ರಾಮಸ್ಥರು ಸುಮಾರು ೮೦ ವರ್ಷಗಳಿಂದ ಅಲ್ಲಿ ವಾಸ ಮಾಡಿಕೊಂಡಿದ್ದು ಆ ವೃತ್ತಕ್ಕೆ ಡಾ|| ಬಿ.ಆರ್.ಅಂಭೇಡ್ಕರ್ ವೃತ್ತ ಎಂದು ಕರೆಯಲ್ಪಡುತ್ತಿತ್ತು. ಆದ್ದರಿಂದ ಆ ವೃತ್ತಕ್ಕೆ ಮಹಾನಾಯಕ ಎಂಬ ನಾಮಫಲಕ ಅಳವಡಿಸಿದ್ದೆವು. ಆದರೆ ಕೆಲವು ಅಂಬೇಡ್ಕರ್ ವಿರೋಧಿಗಳು ನಗರಸಭಾ ಪೌರಾಯುಕ್ತರ ಜೊತೆಗೂಡಿ ರಾತ್ರಿ ಸಮಯದಲ್ಲಿ ಏಕಾಏಕಿ ನಾಮಫಲಕ ತೆರವುಗೊಳಿಸಿರುವುದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಎಂದರು.
ಈ ಸಂಬ0ಧ ಹಿಂದಿನ ದಿನ ಪೌರಾಯುಕ್ತರು ಸ್ಥಳಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಒಟ್ಟುಗೂಡಿ ಇನ್ನೊಂದು ದಿನ ಕಾಲಾವಕಾಶ ನೀಡಿ ಎಂದು ಮನವಿ ಮಾಡಿದ್ದರೂ ಸಹ ರಾತ್ರೋ ರಾತ್ರಿ ನಾಮಫಲಕ ತೆರವುಗೊಳಿಸಿರುವುದು ದಲಿತ ಸಮುದಾಯ ಹಾಗೂ ಗ್ರಾಮಸ್ಥರಿಗೆ ಮಾಡಿದ ಅನ್ಯಾಯವಾಗಿದೆ ಎಂದು ತಿಳಿಸಿದರು.

ಡಿ.ಎಸ್.ಎಸ್. ರಾಜ್ಯ ಸಂಚಾಲಕ ಶ್ರೀನಿವಾಸ್ ಮಾತನಾಡಿ ದುಡಿಯುವ ಜನರಿಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಪ್ರಮುಖ ವೃತ್ತಗಳಲ್ಲಿ ಇರುವಂತಹ ಅಂಬೇಡ್ಕರ್ ಹೆಸರನ್ನು ತೆರವುಗೊಳಿ ಸಿರುವುದು ದಲಿತ ಸಮುದಾಯ ಯಾವ ಪರಿಸ್ಥಿತಿಯಲ್ಲಿದೆ ಎಂದು ಯೋಚಿಸಬೇಕಾಗಿದೆ ಎಂದರು.
ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ ಪೌರಾಯುಕ್ತರು ಉಂಡೇದಾಸರಹಳ್ಳಿ ಹಾಕಿರುವಂತಹ ನಾಮಫಲಕವನ್ನು ಮಾತ್ರ ತೆಗೆಯದೇ ದಲಿತ ಸಮುದಾಯ ಎಲ್ಲಲ್ಲಿ ಮಹಾನಾಯಕ ಧಾರವಾಹಿಯ ಬ್ಯಾನರ್‌ಗಳನ್ನು ಹಾಕಿರುವ ಕಡೆಗಳಲ್ಲಿ ರಾತ್ರೋ ರಾತ್ರಿ ತೆರಳಿ ಪ್ಲೆಕ್ಸ್ಗಳನ್ನು ತೆಗೆಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಹುಣಸೇಮಕ್ಕಿ ಲಕ್ಷö್ಮಣ್, ಭೀಮ್ ಸೇನಾ ಅಧ್ಯಕ್ಷ ಸಂತೋಷ್, ಭೀಮ್ ಆರ್ಮಿ ಅಧ್ಯಕ್ಷ ಗಿರೀಶ್, ಸಿದ್ದರಾಜು ಹಾಗೂ ಉಂಡೇದಾಸರಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ವರದಿ :ಸುರೇಶ್ ಎನ್ ಚಿಕ್ಕಮಗಳೂರು, ಪತ್ರಿಕಾ ಛಾಯಾಗ್ರಾಹಕ

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

14 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

14 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

14 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

14 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

14 hours ago