Featured

ಚಿಕ್ಕಮಗಳೂರು :ಅಂಬೇಡ್ಕರ್ ವೃತ್ತದ ನಾಮಫಲಕ ತೆರವು ; ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳಿಂದ ನಗರಸಭಾ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ – Vishwanews24

ಚಿಕ್ಕಮಗಳೂರು :ಅಂಬೇಡ್ಕರ್ ವೃತ್ತದ ನಾಮಫಲಕ ತೆರವು ; ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳಿಂದ ನಗರಸಭಾ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ – Vishwanews24

ಚಿಕ್ಕಮಗಳೂರು, : ನಗರದ ಉಂಡೇದಾಸರಹಳ್ಳಿಯಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ವೃತ್ತದ ನಾಮಫಲಕವನ್ನು ನಗರಸಭಾ ಪೌರಾಯುಕ್ತರು ರಾತ್ರಿ ಸಮಯದಲ್ಲಿ ತೆರವುಗೊಳಿಸಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳು ನಗರಸಭಾ ಕಛೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಗ್ರಾಮದ ನಿವಾಸಿ ಹೊನ್ನೇಶ್ ಅಂಬೇಡ್ಕರ್ ಪರ ಎನ್ನುವ ನಗರಸಭಾ ಪೌರಾಯುಕ್ತರು ಕೇವಲ ಮೇಲ್ನೋಟಕ್ಕೆ ಮಾತ್ರ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಅಂಬೇಡ್ಕರ್ ವಿರೋಧಿಯಾಗಿ ಕೆಲಸ ಮಾಡುತ್ತಿರುವುದು ಉಂಡೇದಾಸರಹಳ್ಳಿ ನಾಮಫಲಕವನ್ನು ತೆರವುಗೊಳಿಸಿರು ವುದೇ ಸಾಕ್ಷಿಯಾಗಿದೆ ಎಂದು ದೂರಿದರು.

ಉಂಡೇದಾಸರಹಳ್ಳಿಯ ಗ್ರಾಮಸ್ಥರು ಸುಮಾರು ೮೦ ವರ್ಷಗಳಿಂದ ಅಲ್ಲಿ ವಾಸ ಮಾಡಿಕೊಂಡಿದ್ದು ಆ ವೃತ್ತಕ್ಕೆ ಡಾ|| ಬಿ.ಆರ್.ಅಂಭೇಡ್ಕರ್ ವೃತ್ತ ಎಂದು ಕರೆಯಲ್ಪಡುತ್ತಿತ್ತು. ಆದ್ದರಿಂದ ಆ ವೃತ್ತಕ್ಕೆ ಮಹಾನಾಯಕ ಎಂಬ ನಾಮಫಲಕ ಅಳವಡಿಸಿದ್ದೆವು. ಆದರೆ ಕೆಲವು ಅಂಬೇಡ್ಕರ್ ವಿರೋಧಿಗಳು ನಗರಸಭಾ ಪೌರಾಯುಕ್ತರ ಜೊತೆಗೂಡಿ ರಾತ್ರಿ ಸಮಯದಲ್ಲಿ ಏಕಾಏಕಿ ನಾಮಫಲಕ ತೆರವುಗೊಳಿಸಿರುವುದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಎಂದರು.
ಈ ಸಂಬ0ಧ ಹಿಂದಿನ ದಿನ ಪೌರಾಯುಕ್ತರು ಸ್ಥಳಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಒಟ್ಟುಗೂಡಿ ಇನ್ನೊಂದು ದಿನ ಕಾಲಾವಕಾಶ ನೀಡಿ ಎಂದು ಮನವಿ ಮಾಡಿದ್ದರೂ ಸಹ ರಾತ್ರೋ ರಾತ್ರಿ ನಾಮಫಲಕ ತೆರವುಗೊಳಿಸಿರುವುದು ದಲಿತ ಸಮುದಾಯ ಹಾಗೂ ಗ್ರಾಮಸ್ಥರಿಗೆ ಮಾಡಿದ ಅನ್ಯಾಯವಾಗಿದೆ ಎಂದು ತಿಳಿಸಿದರು.

ಡಿ.ಎಸ್.ಎಸ್. ರಾಜ್ಯ ಸಂಚಾಲಕ ಶ್ರೀನಿವಾಸ್ ಮಾತನಾಡಿ ದುಡಿಯುವ ಜನರಿಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಪ್ರಮುಖ ವೃತ್ತಗಳಲ್ಲಿ ಇರುವಂತಹ ಅಂಬೇಡ್ಕರ್ ಹೆಸರನ್ನು ತೆರವುಗೊಳಿ ಸಿರುವುದು ದಲಿತ ಸಮುದಾಯ ಯಾವ ಪರಿಸ್ಥಿತಿಯಲ್ಲಿದೆ ಎಂದು ಯೋಚಿಸಬೇಕಾಗಿದೆ ಎಂದರು.
ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ ಪೌರಾಯುಕ್ತರು ಉಂಡೇದಾಸರಹಳ್ಳಿ ಹಾಕಿರುವಂತಹ ನಾಮಫಲಕವನ್ನು ಮಾತ್ರ ತೆಗೆಯದೇ ದಲಿತ ಸಮುದಾಯ ಎಲ್ಲಲ್ಲಿ ಮಹಾನಾಯಕ ಧಾರವಾಹಿಯ ಬ್ಯಾನರ್‌ಗಳನ್ನು ಹಾಕಿರುವ ಕಡೆಗಳಲ್ಲಿ ರಾತ್ರೋ ರಾತ್ರಿ ತೆರಳಿ ಪ್ಲೆಕ್ಸ್ಗಳನ್ನು ತೆಗೆಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಹುಣಸೇಮಕ್ಕಿ ಲಕ್ಷö್ಮಣ್, ಭೀಮ್ ಸೇನಾ ಅಧ್ಯಕ್ಷ ಸಂತೋಷ್, ಭೀಮ್ ಆರ್ಮಿ ಅಧ್ಯಕ್ಷ ಗಿರೀಶ್, ಸಿದ್ದರಾಜು ಹಾಗೂ ಉಂಡೇದಾಸರಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ವರದಿ :ಸುರೇಶ್ ಎನ್ ಚಿಕ್ಕಮಗಳೂರು, ಪತ್ರಿಕಾ ಛಾಯಾಗ್ರಾಹಕ

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

12 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

12 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

13 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

13 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

13 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

13 hours ago