Featured

ಚಿಕ್ಕಮಗಳೂರು :ಅಂಬೇಡ್ಕರ್ ವೃತ್ತದ ನಾಮಫಲಕ ತೆರವು ; ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳಿಂದ ನಗರಸಭಾ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ – Vishwanews24

ಚಿಕ್ಕಮಗಳೂರು :ಅಂಬೇಡ್ಕರ್ ವೃತ್ತದ ನಾಮಫಲಕ ತೆರವು ; ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳಿಂದ ನಗರಸಭಾ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ – Vishwanews24

ಚಿಕ್ಕಮಗಳೂರು, : ನಗರದ ಉಂಡೇದಾಸರಹಳ್ಳಿಯಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ವೃತ್ತದ ನಾಮಫಲಕವನ್ನು ನಗರಸಭಾ ಪೌರಾಯುಕ್ತರು ರಾತ್ರಿ ಸಮಯದಲ್ಲಿ ತೆರವುಗೊಳಿಸಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮದ ನಿವಾಸಿಗಳು ನಗರಸಭಾ ಕಛೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಗ್ರಾಮದ ನಿವಾಸಿ ಹೊನ್ನೇಶ್ ಅಂಬೇಡ್ಕರ್ ಪರ ಎನ್ನುವ ನಗರಸಭಾ ಪೌರಾಯುಕ್ತರು ಕೇವಲ ಮೇಲ್ನೋಟಕ್ಕೆ ಮಾತ್ರ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಅಂಬೇಡ್ಕರ್ ವಿರೋಧಿಯಾಗಿ ಕೆಲಸ ಮಾಡುತ್ತಿರುವುದು ಉಂಡೇದಾಸರಹಳ್ಳಿ ನಾಮಫಲಕವನ್ನು ತೆರವುಗೊಳಿಸಿರು ವುದೇ ಸಾಕ್ಷಿಯಾಗಿದೆ ಎಂದು ದೂರಿದರು.

ಉಂಡೇದಾಸರಹಳ್ಳಿಯ ಗ್ರಾಮಸ್ಥರು ಸುಮಾರು ೮೦ ವರ್ಷಗಳಿಂದ ಅಲ್ಲಿ ವಾಸ ಮಾಡಿಕೊಂಡಿದ್ದು ಆ ವೃತ್ತಕ್ಕೆ ಡಾ|| ಬಿ.ಆರ್.ಅಂಭೇಡ್ಕರ್ ವೃತ್ತ ಎಂದು ಕರೆಯಲ್ಪಡುತ್ತಿತ್ತು. ಆದ್ದರಿಂದ ಆ ವೃತ್ತಕ್ಕೆ ಮಹಾನಾಯಕ ಎಂಬ ನಾಮಫಲಕ ಅಳವಡಿಸಿದ್ದೆವು. ಆದರೆ ಕೆಲವು ಅಂಬೇಡ್ಕರ್ ವಿರೋಧಿಗಳು ನಗರಸಭಾ ಪೌರಾಯುಕ್ತರ ಜೊತೆಗೂಡಿ ರಾತ್ರಿ ಸಮಯದಲ್ಲಿ ಏಕಾಏಕಿ ನಾಮಫಲಕ ತೆರವುಗೊಳಿಸಿರುವುದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ ಎಂದರು.
ಈ ಸಂಬ0ಧ ಹಿಂದಿನ ದಿನ ಪೌರಾಯುಕ್ತರು ಸ್ಥಳಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಒಟ್ಟುಗೂಡಿ ಇನ್ನೊಂದು ದಿನ ಕಾಲಾವಕಾಶ ನೀಡಿ ಎಂದು ಮನವಿ ಮಾಡಿದ್ದರೂ ಸಹ ರಾತ್ರೋ ರಾತ್ರಿ ನಾಮಫಲಕ ತೆರವುಗೊಳಿಸಿರುವುದು ದಲಿತ ಸಮುದಾಯ ಹಾಗೂ ಗ್ರಾಮಸ್ಥರಿಗೆ ಮಾಡಿದ ಅನ್ಯಾಯವಾಗಿದೆ ಎಂದು ತಿಳಿಸಿದರು.

ಡಿ.ಎಸ್.ಎಸ್. ರಾಜ್ಯ ಸಂಚಾಲಕ ಶ್ರೀನಿವಾಸ್ ಮಾತನಾಡಿ ದುಡಿಯುವ ಜನರಿಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಪ್ರಮುಖ ವೃತ್ತಗಳಲ್ಲಿ ಇರುವಂತಹ ಅಂಬೇಡ್ಕರ್ ಹೆಸರನ್ನು ತೆರವುಗೊಳಿ ಸಿರುವುದು ದಲಿತ ಸಮುದಾಯ ಯಾವ ಪರಿಸ್ಥಿತಿಯಲ್ಲಿದೆ ಎಂದು ಯೋಚಿಸಬೇಕಾಗಿದೆ ಎಂದರು.
ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ ಪೌರಾಯುಕ್ತರು ಉಂಡೇದಾಸರಹಳ್ಳಿ ಹಾಕಿರುವಂತಹ ನಾಮಫಲಕವನ್ನು ಮಾತ್ರ ತೆಗೆಯದೇ ದಲಿತ ಸಮುದಾಯ ಎಲ್ಲಲ್ಲಿ ಮಹಾನಾಯಕ ಧಾರವಾಹಿಯ ಬ್ಯಾನರ್‌ಗಳನ್ನು ಹಾಕಿರುವ ಕಡೆಗಳಲ್ಲಿ ರಾತ್ರೋ ರಾತ್ರಿ ತೆರಳಿ ಪ್ಲೆಕ್ಸ್ಗಳನ್ನು ತೆಗೆಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಹುಣಸೇಮಕ್ಕಿ ಲಕ್ಷö್ಮಣ್, ಭೀಮ್ ಸೇನಾ ಅಧ್ಯಕ್ಷ ಸಂತೋಷ್, ಭೀಮ್ ಆರ್ಮಿ ಅಧ್ಯಕ್ಷ ಗಿರೀಶ್, ಸಿದ್ದರಾಜು ಹಾಗೂ ಉಂಡೇದಾಸರಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ವರದಿ :ಸುರೇಶ್ ಎನ್ ಚಿಕ್ಕಮಗಳೂರು, ಪತ್ರಿಕಾ ಛಾಯಾಗ್ರಾಹಕ

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

6 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

12 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

14 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

14 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

15 hours ago