ಚಿಕ್ಕಮಗಳೂರು : ಗಲಭೆಕೋರರ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಿರುವ ಉತ್ತರ ಪ್ರದೇಶ ಸರಕಾರದ ಕ್ರಮ ದೇಶದಾದ್ಯಂತ ಸುದ್ದಿಯಾಗುತ್ತಿದೆ. ಇದೀಗ ಇಂತಹದ್ದೇ ಪ್ರಯೋಗಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸ್ವಕ್ಷೇತ್ರ ಕಾಫಿನಾಡು ಚಿಕ್ಕಮಗಳೂರು ಸಜ್ಜಾಗಿದೆ. ಅಕ್ರಮವಾಗಿ ಗೋಮಾಂಸ ಮಾರಾಟ (illegal beef sellers) ಮಾಡುವವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಚಿಕ್ಕಮಗಳೂರು ನಗರ ಸಭೆ ಅಧಿಕಾರಿಗಳು ಅಕ್ರಮ ಗೋಮಾಂಸ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ಗೋಮಾಂಸ ಮಾರಾಟ ಮಾಡುವ ಮನೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸ್ಫೋಟಕ, ಮಾದಕ ವಸ್ತು ಸೇರಿದಂತೆ ಗೋ ಹತ್ಯೆ ಮಾಡಿದ್ರೆ ಕಟ್ಟಡವನ್ನೇ ನೆಲಸಮ ಮಾಡುವ ಎಚ್ಚರಿಕೆಯನ್ನು ನೀಡಲಾಗಿದೆ.
ನಗರಸಭೆ ಅಧಿಕಾರಿಗಳು ಈಗಾಗಲೇ 10ಕ್ಕೂ ಅಧಿಕ ಮನೆ, ಅಂಗಡಿಗಳಿಗೆ ನೋಟಿಸ್ ಅಂಟಿಸಿದ್ದಾರೆ. ಕಳೆದ ವಾರವಷ್ಟೇ ಗೋಮಾಂಸ ಅಡ್ಡೆಗಳ ಮೇಲೆ ನಗರಸಭೆಯ ಅಧಿಕಾರಿಗಳು ದಾಳಿ ನಡೆಸಿ, ಜೆಸಿಬಿ ಮೂಲಕ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿತ್ತು. ಇದೀಗ ಮತ್ತೆ ಅಕ್ರಮ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಳು ನೋಟಿಸ್ ಅಂಟಿಸಿದ್ದಾರೆ. ನಗರಸಭೆ ನೋಟಿಸ್ ಅಂಟಿಸಿರುವುದು ಅಕ್ರಮ ಗೋ ಮಾಂಸ ಮಾಡುವವರಿಗೆ ನಡುಕ ಶುರುವಾಗಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾದಿಯಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸ್ವಕ್ಷೇತ್ರದ ಅಧಿಕಾರಿ ಸಾಗಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…