Featured

ಚಿಕ್ಕಮಗಳೂರು: ಅಪರೂಪದ ಜಾತ್ರೆ – ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ – Vishwanews24

ಚಿಕ್ಕಮಗಳೂರು: ಅಪರೂಪದ ಜಾತ್ರೆ ವಿಸ್ಮಯ – ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ

ಚಿಕ್ಕಮಗಳೂರು: ಮಹಾಮಂಗಳಾರತಿ ವೇಳೆ ಸುಮಾರು 16 ಅಡಿ ಎತ್ತರದ ಮಣ್ಣಿನ ಹುತ್ತವೊಂದು  10 ರಿಂದ 15 ಡಿಗ್ರಿ ಅಲುಗಾಡುವ ಮೂಲಕ ನೋಡುಗರಲ್ಲಿ ಆಶ್ಚರ್ಯ ಮೂಡಿಸಿ, ಭಕ್ತರನ್ನು ಮಂತ್ರಮುಗ್ಧರನ್ನಾಗಿಸುವಂತಹ ಅಪರೂಪದ ಜಾತ್ರೆಯೊಂದು ಜಿಲ್ಲೆಯ ಮೂಡಿಗೆರೆ  ತಾಲೂಕಿನ ಬಣಕಲ್ ಸಮೀಪದ ಬಾನಹಳ್ಳಿಯಲ್ಲಿ ಶತಮಾನಗಳಿಂದ ಸದ್ದಿಲ್ಲದೆ ನಡೆಯುತ್ತಿದೆ.

ಶತಮಾನಗಳಿಂದ ಆ ಹುತ್ತಕ್ಕೆ ಸೂರಿಲ್ಲ. ತಡೆಗೋಡೆಗಳಿಲ್ಲ. ಆದರೂ ಮಳೆ-ಗಾಳಿಗೆ ಒಂದಿಂಚು ಕರಗಿಲ್ಲ. ಹುತ್ತದ ಸುತ್ತಲೂ ಕಲ್ಲು-ಸಿಮೆಂಟ್‍ಗಳಿಂದ ಬಂದೋಬಸ್ತ್ ಮಾಡಿದ್ದರೂ ಕೂಡ ದೀಪಾವಳಿ (Deepavali) ಅಮಾವಸ್ಯೆಯ ನಂತರ ಮಕ್ಕಳ ಹುಣ್ಣೆಮೆಯ ದಿನ ಮಹಾಮಂಗಳಾರತಿ ವೇಳೆ ಇಲ್ಲಿ ನಡೆಯುವ ವಿಚಿತ್ರವನ್ನು ಕಂಡು ನಾಸ್ತಿಕರೂ ಕೂಡ ಆಸ್ತಿಕರಾಗುತ್ತಿದ್ದಾರೆ. ಇದನ್ನೂ ಓದಿ:  ಕಾಪು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪಾನರರಿಗೆ ಹೊಸ ಮಾರಿಗುಡಿಯಿಂದ ಚಿತ್ರನಟಿ ಜಯಪ್ರಧಾ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮ

ಸುಮಾರು ನಾಲ್ಕು ಶತಮಾನಗಳ ಹಿಂದೆ ದನ ಕಾಯುವ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಇಲ್ಲಿನ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯ ನಂತರದ ಮಕ್ಕಳ ಹುಣ್ಣೆಮೆಯಂದು ನಡೆಯುವ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತಾ ಸುಮಾರು 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತದೆ. ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಈ ಪವಾಡವನ್ನು ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಈ ಉಣ್ಣಕ್ಕಿ ಉತ್ಸವಕ್ಕೆ ಬರುತ್ತಿದ್ದಾರೆ.

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನು ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡುವ ವಾಡಿಕೆ ಇಂದಿಗೂ ಜೀವಂತವಿದೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದ ಇದ್ದು ಯಾವುದೇ ಅನಾಹುತಗಳು ನಡೆಯುವುದಿಲ್ಲ ಎಂಬುವುದು ನಂಬಿಕೆ. ದನ ಕಾಯುವ ಹುಡುಗರು ಕಟ್ಟಿದ ಹುತ್ತವಾದ್ದರಿಂದ ಕರುವನ್ನು ಕಾಡಿಗೆ ಹೊಡೆಯೋ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನು ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ (ಪುರಿ) ಹಾಕುತ್ತೇವೆ ಎಂದು ಹರಕೆ ಕಟ್ಟಿಕೊಳ್ಳುತ್ತಾರೆ. ಇಲ್ಲಿ ಹರಕೆ ಕಟ್ಟಿಕೊಂಡರೆ ಎಂತಹಾ ಕಷ್ಟವೂ ಕಳೆಯುತ್ತದೆ ಎಂಬುವುದು ಭಕ್ತರ ನಂಬಿಕೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯುತ್ತಿದ್ದರೆ ಅಥವಾ ಆಗಾಗ್ಗೆ ಆರೋಗ್ಯ ಹದಗೆಡುತ್ತಿದ್ದರೆ ಇಲ್ಲಿಗೆ ಹರಕೆ ಕಟ್ಟಿಕೊಂಡರೆ ಸಾಕು ವರ್ಷದೊಳಗೆ ಆ ಹರಕೆ ಈಡೇರುತ್ತದೆ ಎನ್ನಲಾಗುತ್ತದೆ. ಹಾಗಾಗಿ, ಸುತ್ತಮುತ್ತಲಿನ ಜಿಲ್ಲೆಯ ಜನರು ಈ ನಾಗಪ್ಪನ ಮಾಯೆಗೆ ಬೆರಗಾಗಿದ್ದಾರೆ. ಇದನ್ನೂ ಓದಿ:ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ..ಸಿಬಿಐ ತನಿಖೆಗೆ ಸುಪ್ರೀಂ ಆದೇಶ – Vishwanews24

ತರ್ಕಕ್ಕೆ ನಿಲುಕದ ಈ ಗ್ರಾಮದ ಉತ್ಸವ ಇಂದಿಗೂ ಪ್ರಶ್ನಾತೀತ. ಹುತ್ತ ಅಲುಗಾಡುವುದರ ಹಿಂದೆ ವೈಜ್ಞಾನಿಕ ಕಾರಣವಿದೆಯೋ ಅಥವಾ ದೈವಿಶಕ್ತಿಯ ಪ್ರಭಾವವಿದೆಯೋ ಎಂಬುವುದು ಇಂದಿಗೂ ನಿಗೂಢ. ದನ ಕಾಯುವ ಹುಡುಗರ ಭಕ್ತಿಯಿಂದಾಗಿ ಈ ಹುತ್ತಾ ಅಲುಗಾಡುತ್ತಾ ಪವಾಡವನ್ನೇ ಸೃಷ್ಟಿಸಿದ್ದರೆ, ಹುತ್ತ ಅಲುಗಾಡುವುದರ ಬಗ್ಗೆ ಆಸ್ತಿಕ ಹಾಗೂ ನಾಸ್ತಿಕರಲ್ಲಿ ಹಲವು ವಾದ-ವಿವಾದಗಳು ಇವೆ. ಆದರೆ, ನೋಡುಗರ ಕಣ್ಮುಂದೆ ನಡೆಯುವ ಈ ವಿಚಿತ್ರ ಹಾಗೂ ವಿಶಿಷ್ಠ ಪವಾಡ ಮಾತ್ರ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದೆ. ಭೂಗರ್ಭದ ಒಡಲಾಳದಲ್ಲಿ ಅಡಗಿರುವ ಒದೊಂದು ಸತ್ಯ ಹೊರಬಂದಾಗಲೂ ದೇವರಿರುವುದು ಸತ್ಯ ಎನಿಸುತ್ತದೆ. ಜನ ಅದನ್ನು ನಂಬಿದ್ದಾರೆ.

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

14 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

15 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

15 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

16 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

2 days ago