ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, 140 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಕೋವಿಡ್ ವ್ಯಾಕ್ಸಿನ್ ತಯಾರಿಸಿ ಅದನ್ನು ಇತರೆ ದೇಶಗಳಿಗೂ ನೀಡಿ ಭಾರತಿಯರಿಗೆ ಉಚಿತವಾಗಿ ನೀಡುವುದು ಸುಲಭದ ಮಾತಲ್ಲ.
ಸರ್ವರನ್ನೂ ಗಮನದಲ್ಲಿರಿಸಿ ಯೋಜನೆ ರೂಪಿಸಲು ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಿಂದ ಮಾತ್ರ ಸಾಧ್ಯ ಎಂದರು.
ಯಾವುದೇ ವ್ಯಾಕ್ಸಿನ್ ತಯಾರಿಕೆ, ಆಕ್ಸಿಜನ್ ತಯಾರಿಕೆ ನಮ್ಮ ದೇಶದಲ್ಲಿ ಇರಲ್ಲಿಲ್ಲ, ಮೋದಿಯವರು ಪ್ರಧಾನಿಯಾದ ಮೇಲೆ ಇದು ಸಾಧ್ಯವಾಗಿದೆ, ಪ್ರತಿ ತಾಲೂಕು ಕೇಂದ್ರದಲ್ಲಿಯೂ ಆಕ್ಸಿಜನ್ ಘಟಕಗಳಿದ್ದು ಸಹಸ್ರಾರು ಪ್ರಾಣ ಉಳಿಯುವಂತಾಗಿದೆ ಎಂದರು. ಭಾರತಿಯ ಸೇನಾಪಡೆ, ಕೃಷಿ ವಲಯ, ಶಿಕ್ಷಣ, ಅರೋಗ್ಯ, ಆಹಾರ ಎಲ್ಲಾ ಕ್ಷೇತ್ರಗಳಿಗೂ ನ್ಯಾಯ ಒದಗಿಸುತ್ತಿರುವ ಪ್ರಧಾನಿ ಮೋದಿಯವರಿಗೆ ಮತ್ತಷ್ಟುಬಲ ತುಂಬಲು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿಮ್ಮ ಆಯ್ಕೆಯಾಗಬೇಕು ಎಂದರು.
12 ಕೋಟಿ ವೆಚ್ಚದಲ್ಲಿ ತಾಯಿ ಮಗುವಿನ ಅಸ್ಪತ್ರೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದ್ದು ಈಗಾಗಲೇ ನಿರ್ಮಾಣಗೊಂಡು ಶೀಘ್ರದಲ್ಲಿಯೇ ಉದ್ಘಾಟನೆಯಾಗಲಿದೆ. ಬೊಮ್ಮಯಿ ಅವರ ಸರ್ಕಾರದ ಅವಧಿಯಲ್ಲಿ ಈ ಕ್ಷೇತ್ರಕ್ಕೆ ಸಾಕಷ್ಟುಅನುದಾನ ಹರಿದು ಬಂದಿದೆ. ಅದು ಫಲಾನುಭವಿಗಳನ್ನು ತಲುಪುವ ಬದಲು ಶಾಸಕರ ಅಪ್ತವಲಯಕ್ಕೆ ತಲುಪಿದೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…