ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, 140 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಕೋವಿಡ್ ವ್ಯಾಕ್ಸಿನ್ ತಯಾರಿಸಿ ಅದನ್ನು ಇತರೆ ದೇಶಗಳಿಗೂ ನೀಡಿ ಭಾರತಿಯರಿಗೆ ಉಚಿತವಾಗಿ ನೀಡುವುದು ಸುಲಭದ ಮಾತಲ್ಲ.
ಸರ್ವರನ್ನೂ ಗಮನದಲ್ಲಿರಿಸಿ ಯೋಜನೆ ರೂಪಿಸಲು ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಿಂದ ಮಾತ್ರ ಸಾಧ್ಯ ಎಂದರು.
ಯಾವುದೇ ವ್ಯಾಕ್ಸಿನ್ ತಯಾರಿಕೆ, ಆಕ್ಸಿಜನ್ ತಯಾರಿಕೆ ನಮ್ಮ ದೇಶದಲ್ಲಿ ಇರಲ್ಲಿಲ್ಲ, ಮೋದಿಯವರು ಪ್ರಧಾನಿಯಾದ ಮೇಲೆ ಇದು ಸಾಧ್ಯವಾಗಿದೆ, ಪ್ರತಿ ತಾಲೂಕು ಕೇಂದ್ರದಲ್ಲಿಯೂ ಆಕ್ಸಿಜನ್ ಘಟಕಗಳಿದ್ದು ಸಹಸ್ರಾರು ಪ್ರಾಣ ಉಳಿಯುವಂತಾಗಿದೆ ಎಂದರು. ಭಾರತಿಯ ಸೇನಾಪಡೆ, ಕೃಷಿ ವಲಯ, ಶಿಕ್ಷಣ, ಅರೋಗ್ಯ, ಆಹಾರ ಎಲ್ಲಾ ಕ್ಷೇತ್ರಗಳಿಗೂ ನ್ಯಾಯ ಒದಗಿಸುತ್ತಿರುವ ಪ್ರಧಾನಿ ಮೋದಿಯವರಿಗೆ ಮತ್ತಷ್ಟುಬಲ ತುಂಬಲು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿಮ್ಮ ಆಯ್ಕೆಯಾಗಬೇಕು ಎಂದರು.
12 ಕೋಟಿ ವೆಚ್ಚದಲ್ಲಿ ತಾಯಿ ಮಗುವಿನ ಅಸ್ಪತ್ರೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದ್ದು ಈಗಾಗಲೇ ನಿರ್ಮಾಣಗೊಂಡು ಶೀಘ್ರದಲ್ಲಿಯೇ ಉದ್ಘಾಟನೆಯಾಗಲಿದೆ. ಬೊಮ್ಮಯಿ ಅವರ ಸರ್ಕಾರದ ಅವಧಿಯಲ್ಲಿ ಈ ಕ್ಷೇತ್ರಕ್ಕೆ ಸಾಕಷ್ಟುಅನುದಾನ ಹರಿದು ಬಂದಿದೆ. ಅದು ಫಲಾನುಭವಿಗಳನ್ನು ತಲುಪುವ ಬದಲು ಶಾಸಕರ ಅಪ್ತವಲಯಕ್ಕೆ ತಲುಪಿದೆ ಎಂದರು.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…