ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಏಪ್ರಿಲ್ 26ರಂದು ಮತದಾನ ನಡೆಯಲಿರುವ ಕಾರಣ ಏ. 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್ಗೆ ಅವಕಾಶ ನೀಡದಂತೆ ಚಿಕ್ಕಮಗಳೂರು ಜಿಲ್ಲೆಯ ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಮತದಾನದ ದಿನ ರಜೆಯಿರುವ ಕಾರಣ ವಾರಾಂತ್ಯದ ರಜೆಯ ಉಪಯೋಗ ಪಡೆದು ಜನರು ಪ್ರವಾಸಕ್ಕೆ ತೆರಳಿದರೆ ಮತದಾನ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಮತದಾನ ಪ್ರಮಾಣ ಹೆಚ್ಚಿಸಲು ಈ ಮೂಲಕ ನೆರವಾಗಬೇಕು ಎಂದು ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಚಿಕ್ಕಮಗಳೂರಿಗೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವ ಹಿನ್ನೆಲೆ ಮತದಾನ ಪ್ರಕ್ರಿಯೆಯಿಂದ ಮತದಾರ ಹೊರಗುಳಿಯಬಾರದೆಂಬ ಉದ್ದೇಶದಿಂದ ಈ ಸೂಚನೆ ನೀಡಲಾಗಿದ್ದು, ಅತಿ ಹೆಚ್ಚು ಮತದಾನ ನಡೆಸೋ ಉದ್ದೇಶದಿಂದ ಬುಕ್ಕಿಂಗ್ ಕ್ಯಾನ್ಸಲ್ ಗೆ ಮನವಿ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಹೋಂ ಸ್ಟೆ ಹಾಗೂ ರೇಸಾರ್ಟ್ ಮಾಲೀಕರಿಗೆ ಲಿಖಿತವಾಗಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…