ಮಂಗಳೂರು: ಚಿಕ್ಕಮಗಳೂರಿನಲ್ಲಿ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು. ಪೀಡಿತ ಹೆಣ್ಣುಮಗಳು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಮಾಹಿತಿ ಲಭ್ಯವಾಗಿದ್ದು, ಅದರ ಅನ್ವಯ ಪ್ರಕರಣವನ್ನು ಪಿಸಿಆರ್ ಕಾಯ್ದೆಯಡಿ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ :
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಅವರು ಯಾಕೆ ಹೋಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಸ್ವಂತ ಹಣದಲ್ಲಿ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಆಸ್ಟ್ರೇಲಿಯಾ ಸೇರಿದಂತೆ ಎಲ್ಲೆಡೆ ಕೃಷಿ ಇದೆ. ಬಜೆಟ್ ತಯಾರಿಸುವುದು ಮುಖ್ಯಮಂತ್ರಿ ಮತ್ತು ಹಣಕಾಸು ಇಲಾಖೆಯ ಕೆಲಸ. ಸಿಎಲ್ಪಿ ಸಭೆಯಲ್ಲಿ ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದನ್ನೆಲ್ಲಾ ಕ್ರೋಡೀಕರಿಸಿ ಬಜೆಟ್ ಸಿದ್ಧಪಡಿಸಲಾಗುತ್ತದೆ. ಶಾಸಕರು ಎಲ್ಲಿ ಬೇಕಾದರೂ ಹೋಗಬಹುದು, ಬರಬಹುದು. ನಮ್ಮಲ್ಲಿ ಯಾವುದೇ ಕದನವಿಲ್ಲ,” ಎಂದು ಹೇಳಿದರು.
ಆರ್ಎಸ್ಎಸ್ ಕುರಿತು ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅದು ಅವರ ವೈಯಕ್ತಿಕ ಅಭಿಪ್ರಾಯ. ಆರ್ಎಸ್ಎಸ್ ಬಗ್ಗೆ ಅವರಿಗೆ ಅವರದೇ ಆದ ಅಭಿಪ್ರಾಯವಿದೆ. ಅದಕ್ಕೆ ನನ್ನ ಹೇಳಿಕೆ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ :
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…