ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಳಸದಲ್ಲಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಿವಮೊಗ್ಗ ಮೂಲದ ಯುವಕನ ಮೃತದೇಹವನ್ನು ಉಡುಪಿ ಈಶ್ವರ್ ಮಲ್ಪೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸತತ ಕಾರ್ಯಾಚರಣೆ ನಡೆಸುವ ಮೂಲಕ ನೀರಿನಿಂದ ಮೇಲಕ್ಕೆತ್ತಿದ್ದಾರೆ.
ಶಿವಮೊಗ್ಗ ನಿವಾಸಿ ಹರೀಶ್ (24) ನೀರಿಗೆ ಬಿದ್ದು ನಾಪತ್ತೆಯಾಗಿ ಬಳಿಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವಕನಾಗಿದ್ದಾನೆ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಇಲ್ಲಿನ ಕಳಸದಿಂದ ಸುಮಾರು 18 ಕಿಲೋಮೀಟರ್ ದೂರದಲ್ಲಿರುವ ಬಾಳೆಹೊಳೆ ಗ್ರಾಮದ ಭದ್ರಾ ನದಿಯಲ್ಲಿ ಈತ ಬಿದ್ದು ನಾಪತ್ತೆಯಾಗಿರುವ ಕುರಿತು ಕಳಸ ಠಾಣಾಧಿಕಾರಿಗಳು ಉಡುಪಿಯ ಈಶ್ವರ ಮಲ್ಪೆಯವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಆಗಮಿಸಿದ ಅವರು ಸ್ಥಳೀಯ ಈಜುಪಟುಗಳು, ಅಗ್ನಿಶಾಮಕ ಸಿಬ್ಬಂದಿಗಳು,ಧರ್ಮಸ್ಥಳದ ಶೌರ್ಯ ವಿಪತ್ತು ತಂಡದೊಂದಿಗೆ ಸತತ ಕಾರ್ಯಾಚರಣೆಯ ನಡೆಸಿ ಹರೀಶ್ ಮೃತದೇಹ ಮೇಲೆಕ್ಕೆತ್ತುವಲ್ಲಿ ಯಶಸ್ವಿಯಾದರು.
ಕಳಸ ಪೊಲೀಸ್ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಈಶ್ವರ್ ಮಲ್ಪೆಯವರ ಕ್ಲಪ್ತ ಸಮಯದ ಸಹಕಾರಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…