Featured

ಚಿಕ್ಕಮಗಳೂರು : ಕೇಸರಿ ಶಾಲು ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆ – Vishwanews24

ಚಿಕ್ಕಮಗಳೂರು : ಕೇಸರಿ ಶಾಲು ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆ – Vishwanews24

ಅನ್ಯ ಕೋಮಿನ ವಿದ್ಯಾರ್ಥಿನಿಯರು ತರಗತಿಯ ಒಳಗೆ ಸ್ಕಾರ್ಫ್ ಧರಿಸುವಂತಿಲ್ಲ ಪೋಷಕರ ಸಭೆಯಲ್ಲಿ ಒಮ್ಮತದ ನಿರ್ಧಾರ..

ಚಿಕ್ಕಮಗಳೂರು: ಕಳೆದ ಎಂಟತ್ತು ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಲೆದೂರಿದ್ದ ಕೇಸರಿ ಶಾಲು ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆಬಿದ್ದಿದೆ.

ಕಾಲೇಜಿನ ಪ್ರಾಂಶುಪಾಲರು ಸೋಮವಾರ ಕಾಲೇಜಿನಲ್ಲಿ ಪೋಷಕರ ಸಭೆ ಕರೆದಿದ್ದರು. ಪೋಷಕರ ಸಭೆಯಲ್ಲಿ ಅನ್ಯ ಕೋಮಿನ ವಿದ್ಯಾರ್ಥಿನಿಯರು ತರಗತಿಯ ಒಳಗೆ ಸ್ಕಾರ್ಫ್ ಧರಿಸುವಂತಿಲ್ಲ, ತಲೆಯ ಮೇಲೆ ವೇಲ್ ಹಾಕಿಕೊಳ್ಳಲು ಅಷ್ಟೇ ಅವಕಾಶ. ವೇಲ್‌ನ್ನು ಪಿನ್‌ಗಳಿಂದ ಸುತ್ತಿ ಕಟ್ಟುವಂತಿಲ್ಲ ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.

ಪೋಷಕರ ಸಭೆಯಲ್ಲಿ ಪ್ರಾಂಶುಪಾಲ ಅನಂತ್ ಮಾತನಾಡಿ, 2018ರಲ್ಲೂ ಇದೇ ವಿವಾದ ತಲೆದೂರಿತ್ತು. ಆಗ ಅಂದಿನ ಸಭೆಯಲ್ಲಿ ತಲೆಯ ಮೇಲೆ ವೇಲ್ ಮಾತ್ರ ಹಾಕಿಕೊಳ್ಳಲು ಅವಕಾಶವಿದೆ ಎಂದು ಅಂದಿನ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಬಾರಿಯೂ ಮತ್ತದೆ ಸಮಸ್ಯೆ ಎದುರಾಗಿದೆ. ಹಾಗಾಗಿ, ಈ ಸಲ ತಮ್ಮೆಲ್ಲರ ಅಭಿಪ್ರಾಯ ಪಡೆದು ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ವಿದ್ಯಾರ್ಥಿಗಳು ಕಾಲೇಜಿನ ಶಿಸ್ತು ಕ್ರಮ ಉಲ್ಲಂಘಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುವುದು. ಯಾವ ವಿದ್ಯಾರ್ಥಿಯಾದರು ಇಂದಿನ ತೀರ್ಮಾನಗಳಿಗೆ ತದ್ವಿರುದ್ಧವಾಗಿ ನಡೆದುಕೊಂಡರೇ ಪೋಷಕರನ್ನು ಕರೆಸಿ ವರ್ಗಾವಣೆ ಪತ್ರ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ರಾಜೇಗೌಡ, ವಿದ್ಯಾರ್ಥಿಗಳು ಕಲಿಕೆಗೆ ಅಷ್ಟೇ ಆದ್ಯತೆ ನೀಡಬೇಕು. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಶಿಸ್ತಿನಿಂದ ವರ್ತಿಸಬೇಕು. ಕಾಲೇಜಿನಲ್ಲಿ ಭಾವನೆಗಳನ್ನ ಕೆರಳಿಸುವ ಕೆಲಸ ಆಗಬಾರದು ಎಂದರು.

ಅನ್ಯ ಕೋಮಿನ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದರಿಂದ ಮತ್ತೊಂದು ಕೋಮಿನ ವಿದ್ಯಾರ್ಥಿಗಳು ಕೇಸರಿ ಶಲ್ಯ ಹಾಕಿಕೊಂಡು ಬರುತ್ತಿದ್ದರು. ಕಳೆದೊಂದು ವಾರದ ಹಿಂದೆ ಸ್ಕಾರ್ಫ್ ವಿರುದ್ಧ ವಿದ್ಯಾರ್ಥಿಗಳು ಸ್ಕಾರ್ಫ್ ವಿರುದ್ಧ ಪ್ರತಿಭಟನೆ ಕೂಡ ನಡೆಸಿದ್ದರು. ಇಂದು ಕಾಲೇಜಿನ ಪ್ರಾಚಾರ್ಯರು ಪೋಷಕರು ಸಭೆ ಕರೆದು ಈ ನಿರ್ಧಾರಕ್ಕೆ ಬಂದಿದ್ದಾರೆ.

 

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

12 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

12 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

12 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

15 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago