Featured

ಚಿಕ್ಕಮಗಳೂರು : ಕೇಸರಿ ಶಾಲು ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆ – Vishwanews24

ಚಿಕ್ಕಮಗಳೂರು : ಕೇಸರಿ ಶಾಲು ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆ – Vishwanews24

ಅನ್ಯ ಕೋಮಿನ ವಿದ್ಯಾರ್ಥಿನಿಯರು ತರಗತಿಯ ಒಳಗೆ ಸ್ಕಾರ್ಫ್ ಧರಿಸುವಂತಿಲ್ಲ ಪೋಷಕರ ಸಭೆಯಲ್ಲಿ ಒಮ್ಮತದ ನಿರ್ಧಾರ..

ಚಿಕ್ಕಮಗಳೂರು: ಕಳೆದ ಎಂಟತ್ತು ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಲೆದೂರಿದ್ದ ಕೇಸರಿ ಶಾಲು ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆಬಿದ್ದಿದೆ.

ಕಾಲೇಜಿನ ಪ್ರಾಂಶುಪಾಲರು ಸೋಮವಾರ ಕಾಲೇಜಿನಲ್ಲಿ ಪೋಷಕರ ಸಭೆ ಕರೆದಿದ್ದರು. ಪೋಷಕರ ಸಭೆಯಲ್ಲಿ ಅನ್ಯ ಕೋಮಿನ ವಿದ್ಯಾರ್ಥಿನಿಯರು ತರಗತಿಯ ಒಳಗೆ ಸ್ಕಾರ್ಫ್ ಧರಿಸುವಂತಿಲ್ಲ, ತಲೆಯ ಮೇಲೆ ವೇಲ್ ಹಾಕಿಕೊಳ್ಳಲು ಅಷ್ಟೇ ಅವಕಾಶ. ವೇಲ್‌ನ್ನು ಪಿನ್‌ಗಳಿಂದ ಸುತ್ತಿ ಕಟ್ಟುವಂತಿಲ್ಲ ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.

ಪೋಷಕರ ಸಭೆಯಲ್ಲಿ ಪ್ರಾಂಶುಪಾಲ ಅನಂತ್ ಮಾತನಾಡಿ, 2018ರಲ್ಲೂ ಇದೇ ವಿವಾದ ತಲೆದೂರಿತ್ತು. ಆಗ ಅಂದಿನ ಸಭೆಯಲ್ಲಿ ತಲೆಯ ಮೇಲೆ ವೇಲ್ ಮಾತ್ರ ಹಾಕಿಕೊಳ್ಳಲು ಅವಕಾಶವಿದೆ ಎಂದು ಅಂದಿನ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಬಾರಿಯೂ ಮತ್ತದೆ ಸಮಸ್ಯೆ ಎದುರಾಗಿದೆ. ಹಾಗಾಗಿ, ಈ ಸಲ ತಮ್ಮೆಲ್ಲರ ಅಭಿಪ್ರಾಯ ಪಡೆದು ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ವಿದ್ಯಾರ್ಥಿಗಳು ಕಾಲೇಜಿನ ಶಿಸ್ತು ಕ್ರಮ ಉಲ್ಲಂಘಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುವುದು. ಯಾವ ವಿದ್ಯಾರ್ಥಿಯಾದರು ಇಂದಿನ ತೀರ್ಮಾನಗಳಿಗೆ ತದ್ವಿರುದ್ಧವಾಗಿ ನಡೆದುಕೊಂಡರೇ ಪೋಷಕರನ್ನು ಕರೆಸಿ ವರ್ಗಾವಣೆ ಪತ್ರ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ರಾಜೇಗೌಡ, ವಿದ್ಯಾರ್ಥಿಗಳು ಕಲಿಕೆಗೆ ಅಷ್ಟೇ ಆದ್ಯತೆ ನೀಡಬೇಕು. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಶಿಸ್ತಿನಿಂದ ವರ್ತಿಸಬೇಕು. ಕಾಲೇಜಿನಲ್ಲಿ ಭಾವನೆಗಳನ್ನ ಕೆರಳಿಸುವ ಕೆಲಸ ಆಗಬಾರದು ಎಂದರು.

ಅನ್ಯ ಕೋಮಿನ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದರಿಂದ ಮತ್ತೊಂದು ಕೋಮಿನ ವಿದ್ಯಾರ್ಥಿಗಳು ಕೇಸರಿ ಶಲ್ಯ ಹಾಕಿಕೊಂಡು ಬರುತ್ತಿದ್ದರು. ಕಳೆದೊಂದು ವಾರದ ಹಿಂದೆ ಸ್ಕಾರ್ಫ್ ವಿರುದ್ಧ ವಿದ್ಯಾರ್ಥಿಗಳು ಸ್ಕಾರ್ಫ್ ವಿರುದ್ಧ ಪ್ರತಿಭಟನೆ ಕೂಡ ನಡೆಸಿದ್ದರು. ಇಂದು ಕಾಲೇಜಿನ ಪ್ರಾಚಾರ್ಯರು ಪೋಷಕರು ಸಭೆ ಕರೆದು ಈ ನಿರ್ಧಾರಕ್ಕೆ ಬಂದಿದ್ದಾರೆ.

 

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

7 minutes ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

39 minutes ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

14 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

18 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

20 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

21 hours ago