ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ : ಸ್ಥಳದಲ್ಲೇ ಇಬ್ಬರು ಸಾವು, ಮತ್ತಿಬ್ಬರು ಗಂಭೀರ – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ : ಸ್ಥಳದಲ್ಲೇ ಇಬ್ಬರು ಸಾವು, ಮತ್ತಿಬ್ಬರು ಗಂಭೀರ – Vishwanews24

ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದಿದೆ.

ಮೃತರನ್ನ ರಾಜಶೇಖರ್ ಹಾಗೂ ಮಣಿಕಂಠ ಎಂದು ಗುರುತಿಸಲಾಗಿದೆ. ಕೊಪ್ಪದ ಗುಣವಂತೆ ಮೆಡಿಕಲ್ ಸ್ಟೋರಿನ ಮಾಲೀಕರಾದ ರಾಜಶೇಖರ್ ಹಾಗೂ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಮಣಿಕಂಠ ಮೃತರಾಗಿದ್ದಾರೆ. ಕೆಲಸದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಆಗುಂಬೆಗೆ ಹೋಗಿ ವಾಪಸ್ ಕೊಪ್ಪಕ್ಕೆ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸದೆ.

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡ ಕಾನ್‌ಸ್ಟೇಬಲ್‌ಗಳಿಂದ ಡ್ರಗ್ ವ್ಯಾಪಾರ: ಇಬ್ಬರ ಬಂಧನ – Vishwanews24

ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗೊಜ್ಜಾಗಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹರಿಹರಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದುವೆ ಸಂಭ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ಅವಹೇಳನ ಪ್ರಕರಣ ; ಮದುಮಗನ ಮನೆಗೆ ಕಲ್ಲು ತೂರಾಟ – Vishwanews24

Leave a Reply