ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿಕೊಂಡಿದ್ದಾರೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ ಅನ್ನೋವಂತಾಗಿದೆ. ಜಾರುವ ಬಂಡೆಗಳ ಮೇಲೆ ಹತ್ತಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ.
ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಟೂರಿಸ್ಟ್ ಗಳು ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ. ಕೆಲ ಪ್ರವಾಸಿಗರಿಗೆ ಟ್ರಾಫಿಕ್ ಜಾಮ್ ಮಾಡ್ಕೊಂಡು ರಸ್ತೆ ಮಧ್ಯೆ ಟಿಕ್ಟಾಕ್ ಮಾಡೋ ಶೋಕಿಯಾದ್ರೆ, ಇನ್ನೂ ಕೆಲವರು ಜಾರು ಬಂಡೆಗಳ ಮೇಲೆ ಹತ್ತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ.
ಸ್ವಲ್ಪ ಯಾಮಾರಿ ಜಾರಿ ಬಿದ್ದರೂ ಕೈ-ಕಾಲುಗಳಿಗೆ ಗಾಯಗಳಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿರುವ ಹಾಗೂ ಪ್ರಾಣವೂ ಹೋದ ಉದಾಹರಣೆಗಳು ಸಾಕಷ್ಟಿವೆ. ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…