ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿಕೊಂಡಿದ್ದಾರೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ ಅನ್ನೋವಂತಾಗಿದೆ. ಜಾರುವ ಬಂಡೆಗಳ ಮೇಲೆ ಹತ್ತಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ.
ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಟೂರಿಸ್ಟ್ ಗಳು ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ. ಕೆಲ ಪ್ರವಾಸಿಗರಿಗೆ ಟ್ರಾಫಿಕ್ ಜಾಮ್ ಮಾಡ್ಕೊಂಡು ರಸ್ತೆ ಮಧ್ಯೆ ಟಿಕ್ಟಾಕ್ ಮಾಡೋ ಶೋಕಿಯಾದ್ರೆ, ಇನ್ನೂ ಕೆಲವರು ಜಾರು ಬಂಡೆಗಳ ಮೇಲೆ ಹತ್ತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ.
ಸ್ವಲ್ಪ ಯಾಮಾರಿ ಜಾರಿ ಬಿದ್ದರೂ ಕೈ-ಕಾಲುಗಳಿಗೆ ಗಾಯಗಳಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿರುವ ಹಾಗೂ ಪ್ರಾಣವೂ ಹೋದ ಉದಾಹರಣೆಗಳು ಸಾಕಷ್ಟಿವೆ. ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…