ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿಕೊಂಡಿದ್ದಾರೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ ಅನ್ನೋವಂತಾಗಿದೆ. ಜಾರುವ ಬಂಡೆಗಳ ಮೇಲೆ ಹತ್ತಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ.
ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಟೂರಿಸ್ಟ್ ಗಳು ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ. ಕೆಲ ಪ್ರವಾಸಿಗರಿಗೆ ಟ್ರಾಫಿಕ್ ಜಾಮ್ ಮಾಡ್ಕೊಂಡು ರಸ್ತೆ ಮಧ್ಯೆ ಟಿಕ್ಟಾಕ್ ಮಾಡೋ ಶೋಕಿಯಾದ್ರೆ, ಇನ್ನೂ ಕೆಲವರು ಜಾರು ಬಂಡೆಗಳ ಮೇಲೆ ಹತ್ತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ.
ಸ್ವಲ್ಪ ಯಾಮಾರಿ ಜಾರಿ ಬಿದ್ದರೂ ಕೈ-ಕಾಲುಗಳಿಗೆ ಗಾಯಗಳಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿರುವ ಹಾಗೂ ಪ್ರಾಣವೂ ಹೋದ ಉದಾಹರಣೆಗಳು ಸಾಕಷ್ಟಿವೆ. ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…