Featured

ಚಿಕ್ಕಮಗಳೂರು : ತನ್ನ ತೀಕ್ಷ್ಣ ನೆನಪಿನ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಮೂರು ವರ್ಷದ ಆರ್ವಿ -Vishwanews24

ಚಿಕ್ಕಮಗಳೂರು : ತನ್ನ ತೀಕ್ಷ್ಣ ನೆನಪಿನ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಮೂರು ವರ್ಷದ ಆರ್ವಿ -Vishwanews24

ಚಿಕ್ಕಮಗಳೂರು: ತನ್ನ ತೀಕ್ಷ್ಣ ನೆನಪಿನ ಶಕ್ತಿಯಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೂಡಹಳ್ಳಿ ಗ್ರಾಮದ ಮೂರು ವರ್ಷದ ಪುಟ್ಟ ಪೋರಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿ ದಾಖಲೆ ನಿರ್ಮಿಸಿದ್ದಾಳೆ.

ಬಣಕಲ್ ಸಮೀಪದ ಕೂಡಹಳ್ಳಿಯ ಕೆ.ಎಸ್.ಶಾಶ್ವತ್ ಹಾಗೂ ಸ್ಮಿತಾ ದಂಪತಿಯ ಪುತ್ರಿಯಾದ ಮೂರು ವರ್ಷದ ಬಾಲಕಿ ಆರ್ವಿ.ಎಸ್ ತೀಕ್ಷ್ಣ ನೆನೆಪಿನ ಶಕ್ತಿಯಿಂದ ಇಂಡಿಯಾ ಬುಕ್ ಆಪ್ ರೆಕಾರ್ಡ್‍ಗೆ ಆಯ್ಕೆಯಾಗಿದ್ದಾಳೆ. ಆನ್‍ಲೈನ್ ಮೂಲಕ ನಡೆದ ಪರೀಕ್ಷೆಯಲ್ಲಿ ತನ್ನ ಅಸಾಧಾರಣೆ ಪ್ರತಿಭೆ ಹಾಗೂ ನೆನಪಿನ ಶಕ್ತಿಯನ್ನು ಅನಾವರಣಗೊಳಿಸಿದ್ದಾಳೆ. ಪರೀಕ್ಷೆಯಲ್ಲಿ ಕನ್ನಡ ಮತ್ತು ಹಿಂದಿ ಸಂಖ್ಯೆಗಳು, 19 ವಿವಿಧ ವಾಹನಗಳು, ಕನ್ನಡ ಮತ್ತು ಇಂಗ್ಲೀಷ್ ವರ್ಣಮಾಲೆಗಳು, ಇಂಗ್ಲೀಷ್ ಸಂಖ್ಯೆಗಳು, ಕನ್ನಡ-ಇಂಗ್ಲಿಷ್ ಎರಡೂ ಭಾಷೆಯಲ್ಲೂ ದಿನಗಳು, ತಿಂಗಳುಗಳ ಹೆಸರುಗಳನ್ನು ನಿರರ್ಗಳವಾಗಿ ಹೇಳುತ್ತಾಳೆ.

12 ಬಣ್ಣಗಳು, 9 ಆಕಾರಗಳು, 13 ಹಣ್ಣುಗಳು, 15 ತರಕಾರಿಗಳು, 37 ಪ್ರಾಣಿಗಳು, ಏಳು ಇಂಗ್ಲೀಷ್ ಪದ್ಯಗಳು, 7 ಪ್ರಾಣಿಗಳ ಧ್ವನಿಯನ್ನು ಅನುಕರಣೆ ಮಾಡುವ ಮೂಲಕ ತನ್ನ ಅಸಾಧಾರಣ ಪ್ರತಿಭೆಯ ಮೂಲಕ ಬಾಲ್ಯದಲ್ಲೇ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದ್ದಾಳೆ. ಮಗಳ ಸಾಧನೆ ಕಂಡು ನಮಗೂ ತೀವ್ರ ಸಂತೋಷವಾಗಿದೆ ಎಂದು ಆರ್ವಿಯ ತಾಯಿ ಸ್ಮಿತಾ ಶಾಶ್ವತ್ ತಿಳಿಸಿದ್ದಾರೆ.

ನಮ್ಮ ಮಗಳು ಆರ್ವಿ ಒಂದು ವರ್ಷ ತುಂಬಿದ ಮಗುವಾಗಿದ್ದಾಗಲೇ ತುಂಬಾ ಚೂಟಿಯಿಂದ ಇದ್ದಳು. ನಾವು ಏನು ಹೇಳಿದರೂ ನೆನಪಿಡುವ ಗುಣ ಹೊಂದಿದ್ದ ಅವಳಿಗೆ ಅಭ್ಯಾಸ ಮಾಡಿಸಿದ್ದೇವು. ಅದು ಅವಳಿಗೆ ಪ್ರಶಸ್ತಿ ದೊರೆಯಲು ಕಾರಣವಾಯಿತು ಎಂದು ಆರ್ವಿ ತಾಯಿ ಮಗಳ ಸಾಧನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

44 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

1 hour ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

1 hour ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

1 hour ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago