Featured

ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ :  ಶ್ರೀರಾಮಸೇನೆ  – Vishwanews24

ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ :  ಶ್ರೀರಾಮಸೇನೆ

ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಸಮಾಜದಲ್ಲಿ ವ್ಯಕ್ತವಾಗಿದ್ದ ಆಕ್ರೋಶ ಮತ್ತೊಮ್ಮೆ ಭುಗಿಲೇಳುತ್ತದೆ..

ಚಿಕ್ಕಮಗಳೂರು: ತಾಲ್ಲೂಕಿನ ಬಾಬಾಬುಡನ್​ಗಿರಿಯಲ್ಲಿರುವ ಇನಾಂ ದತ್ತಾತ್ರೇಯ ಪೀಠದಲ್ಲಿ  ನವೆಂಬರ್ 13ರ ಒಳಗೆ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಹಿಂದೂಗಳ ಆಕ್ರೋಶ ಎದುರಿಸಲು ಸರ್ಕಾರವು ಸಿದ್ಧವಾಗಬೇಕು ಎಂದು ಶ್ರೀರಾಮಸೇನೆಯ ರಾಜ್ಯ ಸಂಚಾಲಕ ಗಂಗಾಧರ ಕುಲಕರ್ಣಿ ಎಚ್ಚರಿಸಿದರು.

ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದೀರಿ. ಈಗ್ಯಾಕೆ ಸುಮ್ಮನಿದ್ದೀರಿ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುಸ್ಲಿಮರು ಏನು ಮಾಡಿದರೂ ಸುಮ್ಮನಿರುವ ಸರ್ಕಾರವು ನಮಗೆ ನಮಗೆ ಮಾತ್ರ ಎಲ್ಲದಕ್ಕೂ ಕಿರಿಕಿರಿ ಮಾಡುತ್ತದೆ. ನ 13ರ ಒಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಸಮಾಜದಲ್ಲಿ ವ್ಯಕ್ತವಾಗಿದ್ದ ಮಾದರಿಯ ಆಕ್ರೋಶವು ನ 13ರಂದು ಮತ್ತೊಮ್ಮೆ ಭುಗಿಲೇಳುತ್ತದೆ ಎಂದರು.

ಇದನ್ನೂ ಓದಿ: ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಸಂಸದ ಪ್ರತಾಪ ಸಿಂಹ – Vishwanews24

ಮಾಲೆ ಹಾಕಿ ದತ್ತಪೀಠಕ್ಕೆ ಬಾರದಿದ್ದರೆ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದೆ. ಅದೇ ರೀತಿ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದಾರೆ. ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಈಗ ಸುಮ್ಮನಿದ್ದಾರೆ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಎಚ್ಚರಿಸಿದರು.

ದತ್ತಪೀಠದಲ್ಲಿರು ಗಂಧದ ಬಾವಿ ಪೂರ್ತಿ ಕುಸಿಯುವ ಸ್ಥಿತಿ ತಲುಪಿದೆ. ಅಲ್ಲಿರುವ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಸರ್ಕಾರದ ಕೈಲಿ ಅಲ್ಲಿನ ಮಣ್ಣು ರಕ್ಷಣೆ ಮಾಡಲು ಆಗುತ್ತಿಲ್ಲ. ಮುಜರಾಯಿ ಇಲಾಖೆಯು ಗಾಂಧಿಜೀಯ ಮೂರು ಮಂಗಗಳಂತೆ ವರ್ತಿಸುತ್ತಿದೆ. ಮುಸ್ಲಿಮರು ಏನೇ ಮಾಡಿದರೂ ಸುಮ್ಮನಿರುತ್ತದೆ. ನೀವು ಸರ್ಕಾರದ ಅಧೀನಲ್ಲಿದ್ದೀರಾ, ಮುಸ್ಲಿಮರ ಅಧೀನದಲ್ಲಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

3 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago