ಚಿಕ್ಕಮಗಳೂರು: ತಾಲ್ಲೂಕಿನ ಬಾಬಾಬುಡನ್ಗಿರಿಯಲ್ಲಿರುವ ಇನಾಂ ದತ್ತಾತ್ರೇಯ ಪೀಠದಲ್ಲಿ ನವೆಂಬರ್ 13ರ ಒಳಗೆ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಹಿಂದೂಗಳ ಆಕ್ರೋಶ ಎದುರಿಸಲು ಸರ್ಕಾರವು ಸಿದ್ಧವಾಗಬೇಕು ಎಂದು ಶ್ರೀರಾಮಸೇನೆಯ ರಾಜ್ಯ ಸಂಚಾಲಕ ಗಂಗಾಧರ ಕುಲಕರ್ಣಿ ಎಚ್ಚರಿಸಿದರು.
ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದೀರಿ. ಈಗ್ಯಾಕೆ ಸುಮ್ಮನಿದ್ದೀರಿ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಮುಸ್ಲಿಮರು ಏನು ಮಾಡಿದರೂ ಸುಮ್ಮನಿರುವ ಸರ್ಕಾರವು ನಮಗೆ ನಮಗೆ ಮಾತ್ರ ಎಲ್ಲದಕ್ಕೂ ಕಿರಿಕಿರಿ ಮಾಡುತ್ತದೆ. ನ 13ರ ಒಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು. ಇಲ್ಲದಿದ್ದರೆ ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಸಮಾಜದಲ್ಲಿ ವ್ಯಕ್ತವಾಗಿದ್ದ ಮಾದರಿಯ ಆಕ್ರೋಶವು ನ 13ರಂದು ಮತ್ತೊಮ್ಮೆ ಭುಗಿಲೇಳುತ್ತದೆ ಎಂದರು.
ಇದನ್ನೂ ಓದಿ: ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಸಂಸದ ಪ್ರತಾಪ ಸಿಂಹ – Vishwanews24
ಮಾಲೆ ಹಾಕಿ ದತ್ತಪೀಠಕ್ಕೆ ಬಾರದಿದ್ದರೆ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದೆ. ಅದೇ ರೀತಿ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದಾರೆ. ದತ್ತಪೀಠದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಈಗ ಸುಮ್ಮನಿದ್ದಾರೆ. ಹಿಂದೂ ಅರ್ಚಕರನ್ನು ನೇಮಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಹಿಂದೂಗಳು ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಎಚ್ಚರಿಸಿದರು.
ದತ್ತಪೀಠದಲ್ಲಿರು ಗಂಧದ ಬಾವಿ ಪೂರ್ತಿ ಕುಸಿಯುವ ಸ್ಥಿತಿ ತಲುಪಿದೆ. ಅಲ್ಲಿರುವ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಸರ್ಕಾರದ ಕೈಲಿ ಅಲ್ಲಿನ ಮಣ್ಣು ರಕ್ಷಣೆ ಮಾಡಲು ಆಗುತ್ತಿಲ್ಲ. ಮುಜರಾಯಿ ಇಲಾಖೆಯು ಗಾಂಧಿಜೀಯ ಮೂರು ಮಂಗಗಳಂತೆ ವರ್ತಿಸುತ್ತಿದೆ. ಮುಸ್ಲಿಮರು ಏನೇ ಮಾಡಿದರೂ ಸುಮ್ಮನಿರುತ್ತದೆ. ನೀವು ಸರ್ಕಾರದ ಅಧೀನಲ್ಲಿದ್ದೀರಾ, ಮುಸ್ಲಿಮರ ಅಧೀನದಲ್ಲಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…