Featured

ಚಿಕ್ಕಮಗಳೂರು: ದತ್ತಪೀಠ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದ ಇಬ್ಬರ ಸೆರೆ – Vishwanews24

ದತ್ತಪೀಠಕ್ಕೆ ಸಾಗುವ ಮಾರ್ಗದಲ್ಲಿ ಮೊಳೆಗಳನ್ನ ಚೆಲ್ಲಿದ್ದ ಆರೋಪಿಗಳು

ಮೊಹಮದ್‌ ಶಹಬಾಸ್‌ ಹಾಗೂ ವಾಹೀದ್‌ ಹುಸೇನ್‌ ಇಬ್ಬರ ಬಂಧನ

ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಸಾಗುವ ಮಾರ್ಗದಲ್ಲಿ ಅಪಘಾತವಾಗಲಿ ಎಂಬ ಉದ್ದೇಶದಿಂದ ಕಡಿದಾದ ತಿರುವುಗಳಲ್ಲಿ ಮೊಳೆಗಳನ್ನು ಚೆಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಉಳಿದವರು ತಲೆಮರೆಸಿಕೊಂಡಿದ್ದು ಶೋಧ ಕಾರ್ಯ ನಡೆದಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್‌ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಮರ ದತ್ತಪೀಠ ಓಡಾಡುವ ಮಾರ್ಗದಲ್ಲಿ ವಾಹನಗಳಿಗೆ ತೊಂದರೆಯಾಗಲಿ ಎಂಬ ಉದ್ದೇಶದಿಂದ ತಿರುವುಗಳಲ್ಲಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಚೆಲ್ಲಿದ್ದು ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆಸಿದ ಕಿಡಿಗೇಡಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಚಿಕ್ಕಮಗಳೂರು ನಗರದ ಹಾರ್ಡ್‌ವೇರ್‌ ಶಾಪ್‌ನಲ್ಲಿ ಅದೇ ತೆರನಾದ ಮೊಳೆಗಳನ್ನು ಇಬ್ಬರು ವ್ಯಕ್ತಿಗಳು ನಾಲ್ಕು ಕೆಜಿ ಖರೀದಿಸಿದ್ದು, ಖಚಿತ ಮಾಹಿತಿ ಮೇರೆಗೆ ದುಬೈನಗರದ ಮೊಹಮದ್‌ ಶಹಬಾಸ್‌ (29) ಹಾಗೂ ವಾಹೀದ್‌ ಹುಸೇನ್‌ (21) ಎಂಬುವರನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಇದ್ದು, ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ತಂಡ ಕಾರ್ಯಪ್ರವೃತ್ತವಾಗಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago