ಚಿಕ್ಕಮಗಳೂರು: ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹುಟ್ಟೂರು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರಹಳ್ಳಿ ಗ್ರಾಮದಲ್ಲೂ ಮುಸ್ಲಿಂ ಬ್ಯಾನ್ ಕೂಗು ಜೋರಾಗಿದೆ.
ಭಾನುವಾರದಿಂದ ಆರಂಭವಾದ ದೇವೀರಮ್ಮನ ಸುಗ್ಗಿ ಹಬ್ಬಕ್ಕೆ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಊರಿನ ಆರಂಭದಲ್ಲೇ ಬೋರ್ಡ್ ಹಾಕಿದ್ದಾರೆ. ಜಾತ್ರೆ ಇನ್ನೊಂದು ವಾರಗಳ ಕಾಲ ನಡೆಯಲಿದೆ. ಗುರುವಾರ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಸಾವಿರಾರು ಜನ ಸೇರುತ್ತಾರೆ.
ಈ ಬಾರಿಯ ಸುಗ್ಗಿ ಹಬ್ಬಕ್ಕೆ ಮುಸ್ಲಿಮರಿಗೆ ನಮ್ಮ ಊರಿನಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶವಿಲ್ಲವೆಂದು ಹಳ್ಳಿಯ ದ್ವಾರದ ಬಾಗಿಲಿನಲ್ಲೇ ಬ್ಯಾನರ್ ಹಾಕಿದ್ದಾರೆ. ಈ ದೇಶದ ಕಾನೂನನ್ನು ಗೌರವಿಸದ, ನಾವು ಪೂಜಿಸುವ ಗೋವುಗಳನ್ನ ಕಡಿದು ಕೊಲ್ಲುವ ಹಾಗೂ ದೇಶದ ಅಖಂಡತೆಗೆ ಸಾವಲು ಎಸೆಯುವ ಮುಸ್ಲಿಂ ಗೋಕಟುಕರ ಜೊತೆ ನಾವು ವ್ಯವಹರಿಸುವುದಿಲ್ಲ ಹಾಗೂ ಅವರು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಊರಿನ ಮುಂದೆಯೇ ದೊಡ್ಡ ಬೋರ್ಡ್ ಹಾಕಿದ್ದಾರೆ.
ಚಿಕ್ಕಮಾಗರವಳ್ಳಿ, ದೊಡ್ಡಮಾಗರವಳ್ಳಿ, ದೋಣಗೂಡಿಗೆ, ಸಾರಳ್ಳಿ ಹಾಗೂ ಹಳಿಯೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳೆಲ್ಲಾ ಸೇರಿ ಈ ಜಾತ್ರೆ ನಡೆಸುತ್ತಿದ್ದು, ಈವರಗೆ ಮುಸ್ಲಿಮರು ಇಲ್ಲಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದರು. ಈ ಬಾರಿ ಈ ಜಾತ್ರೆಗೆ ಮುಸ್ಲಿಮರಿಗೆ ಅವಕಾಶವಿಲ್ಲದಂತಾಗಿದೆ.
ಪ್ರತಿ ವರ್ಷ ಈ ಜಾತ್ರೆಯಲ್ಲಿ ಹತ್ತಾರು ಮುಸ್ಲಿಮರು ವಿವಿಧ ರೀತಿಯ ಅಂಗಡಿ ಹಾಕಿ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಆದರೆ, ಈ ಬಾರಿ ಹಿಜಬ್ ವಿವಾದಕ್ಕೆ ಹೈಕೋರ್ಟ್ ನೀಡಿದ ತೀರ್ಪನ್ನ ಗೌರವಿಸದ ಹಿನ್ನೆಲೆ ಜಾತ್ರೆಯಲ್ಲಿ ಮುಸ್ಲಿಮರು ವ್ಯಾಪಾರ-ವಹಿವಾಟು ನಡೆಸದಂತಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…