Featured

ಚಿಕ್ಕಮಗಳೂರು : ಪತ್ನಿಯನ್ನು ಕೊಲೆಗೈದು ಕೊಳವೆಬಾವಿಯಲ್ಲಿ ಮೃತದೇಹ ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವನ ಬಂಧನ – vishwanews24

ಚಿಕ್ಕಮಗಳೂರು : ಪತ್ನಿಯನ್ನು ಕೊಲೆಗೈದು ಕೊಳವೆಬಾವಿಯಲ್ಲಿ ಮೃತದೇಹ ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವನ ಬಂಧನ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆಗೈದು ಮೃತದೇಹವನ್ನು ಕೊಳವೆಬಾವಿಯಲ್ಲಿ ಹೂತಿಟ್ಟ ಪ್ರಕರಣವೊಂದು ಕಡೂರು ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಕಡೂರು ತಾಲೂಕಿನ ಆಲಘಟ್ಟ ಗ್ರಾಮ ನಿವಾಸಿ ಭಾರತಿ(28) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಭಾರತಿಯವರ ಪತಿ ವಿಜಯ್, ಅತ್ತೆ ತಾಯಮ್ಮ, ಮಾವ ಗೋವಿಂದಪ್ಪನನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಘಟನೆ: ಸುಮಾರು ಒಂದೂವರೆ ತಿಂಗಳ ಹಿಂದೆ ತನ್ನ ಪತ್ನಿ ಭಾರತಿ ನಾಪತ್ತೆಯಾಗಿರುವುದಾಗಿ ವಿಜಯ್ ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಬಗ್ಗೆ ತನಿಖೆ ಮಾಡಿದ ಪೊಲೀಸರು ದೂರುದಾರನೇ ಪತ್ನಿಯನ್ನು ಕೊಲೆಗೈದಿರುವುದನ್ನು ಪತ್ತೆಹಚ್ಚುವಲ್ಲಿ ಸಫಲರಾಗಿದ್ದಾರೆ.

ಒಂದೂವರೆ ತಿಂಗಳ ಹಿಂದೆ ಪತಿ-ಪತ್ನಿ ಮಧ್ಯೆ ಜಗಳ ನಡೆದು, ಆರೋಪಿ ವಿಜಯ್ ಪತ್ನಿ ಭಾರತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಭಾರತಿ ಮೃತಪಟ್ಟಿದ್ದಾರೆನ್ನಲಾಗಿದೆ. ಬಳಿಕ ಮೃತದೇಹವನ್ನು ತಮ್ಮ ತೋಟದಲ್ಲಿರುವ ನಿರುಪಯುಕ್ತ ಕೊಳವೆಬಾವಿಯೊಳಗೆ ಹಾಕಿ ಮುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವಿಜಯ್, ಆತನ ತಂದೆ ಗೋವಿಂದಪ್ಪ ಮತ್ತು ತಾಯಿ ತಾಯಮ್ಮಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago