Featured

ಚಿಕ್ಕಮಗಳೂರು : ಪತ್ನಿಯನ್ನು ಕೊಲೆಗೈದು ಕೊಳವೆಬಾವಿಯಲ್ಲಿ ಮೃತದೇಹ ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವನ ಬಂಧನ – vishwanews24

ಚಿಕ್ಕಮಗಳೂರು : ಪತ್ನಿಯನ್ನು ಕೊಲೆಗೈದು ಕೊಳವೆಬಾವಿಯಲ್ಲಿ ಮೃತದೇಹ ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವನ ಬಂಧನ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆಗೈದು ಮೃತದೇಹವನ್ನು ಕೊಳವೆಬಾವಿಯಲ್ಲಿ ಹೂತಿಟ್ಟ ಪ್ರಕರಣವೊಂದು ಕಡೂರು ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಕಡೂರು ತಾಲೂಕಿನ ಆಲಘಟ್ಟ ಗ್ರಾಮ ನಿವಾಸಿ ಭಾರತಿ(28) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಭಾರತಿಯವರ ಪತಿ ವಿಜಯ್, ಅತ್ತೆ ತಾಯಮ್ಮ, ಮಾವ ಗೋವಿಂದಪ್ಪನನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಘಟನೆ: ಸುಮಾರು ಒಂದೂವರೆ ತಿಂಗಳ ಹಿಂದೆ ತನ್ನ ಪತ್ನಿ ಭಾರತಿ ನಾಪತ್ತೆಯಾಗಿರುವುದಾಗಿ ವಿಜಯ್ ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಬಗ್ಗೆ ತನಿಖೆ ಮಾಡಿದ ಪೊಲೀಸರು ದೂರುದಾರನೇ ಪತ್ನಿಯನ್ನು ಕೊಲೆಗೈದಿರುವುದನ್ನು ಪತ್ತೆಹಚ್ಚುವಲ್ಲಿ ಸಫಲರಾಗಿದ್ದಾರೆ.

ಒಂದೂವರೆ ತಿಂಗಳ ಹಿಂದೆ ಪತಿ-ಪತ್ನಿ ಮಧ್ಯೆ ಜಗಳ ನಡೆದು, ಆರೋಪಿ ವಿಜಯ್ ಪತ್ನಿ ಭಾರತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಭಾರತಿ ಮೃತಪಟ್ಟಿದ್ದಾರೆನ್ನಲಾಗಿದೆ. ಬಳಿಕ ಮೃತದೇಹವನ್ನು ತಮ್ಮ ತೋಟದಲ್ಲಿರುವ ನಿರುಪಯುಕ್ತ ಕೊಳವೆಬಾವಿಯೊಳಗೆ ಹಾಕಿ ಮುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವಿಜಯ್, ಆತನ ತಂದೆ ಗೋವಿಂದಪ್ಪ ಮತ್ತು ತಾಯಿ ತಾಯಮ್ಮಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

3 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

12 minutes ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

30 minutes ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

41 minutes ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

50 minutes ago

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

20 hours ago