Featured

ಚಿಕ್ಕಮಗಳೂರು : ಪ್ರಯಾಣಿಕರ ಬದುಕಿಗೆ ಟ್ಯಾಕ್ಸಿ ಚಾಲಕರು ರಕ್ಷಕರು : ಕಣ್ಣನ್ – Vishwanews24

ಚಿಕ್ಕಮಗಳೂರು : ಪ್ರಯಾಣಿಕರ ಬದುಕಿಗೆ ಟ್ಯಾಕ್ಸಿ ಚಾಲಕರು ರಕ್ಷಕರು : ಕಣ್ಣನ್ – Vishwanews24

ಚಿಕ್ಕಮಗಳೂರು:- ಟ್ಯಾಕ್ಸಿ ಚಾಲಕರು ಪ್ರಯಾಣಿಕರ ಜೊತೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಸಹಕರಿಸಿದಾಗ ಮಾತ್ರ ಚಾಲನೆ ವೃತ್ತಿಯಲ್ಲಿ ಮುಂದುವರೆಯಲು ಸಾಧ್ಯ ಎಂದು ಹಿರೇಮಗಳೂರು ಕಣ್ಣನ್ ಹೇಳಿದರು.

ನಗರದ ಹಿರೇಮಗಳೂರು ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಚಾಲಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರಯಾಣಿಕರ ಬದುಕಿಗೆ ಟ್ಯಾಕ್ಸಿ ಚಾಲಕರು ನಿಜವಾದ ಸಂರಕ್ಷಕ. ಭಗವಂತನು ಯಾವ ಕ್ಷಣದಲ್ಲಿ ಚಾಲಕನಿಗೆ ಸಂರಕ್ಷಣೆ ನೀಡಿತ್ತಾನೋ ಆ ಕ್ಷಣದಿಂದಲೇ ಪ್ರಯಾಣಿಕರ ರಕ್ಷಣೆ ಚಾಲಕನ ಮೇಲಿರುತ್ತದೆ ಎಂದ ಅವರು ಭಗವಾನ್ ಶ್ರೀಕೃಷ್ಣನೂ ಕೂಡಾ ಯುದ್ಧಭೂಮಿಯಲ್ಲಿ ಅರ್ಜುನನ ಸಾರಥಿಯಾಗಿದ್ದರು ಎಂದು ಹೇಳಿದರು.

ಇದನ್ನೂ ಓದಿ :

ಚಾಲನೆ ವೃತ್ತಿಯಲ್ಲಿರುವವರು ಪ್ರಯಾಣಿಕರಲ್ಲಿ ಯಾವುದೇ ಜಾತಿ, ಧರ್ಮ ಬೇಧ ಬಾವ ಮಾಡದೇ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಆ ನಿಟ್ಟಿನಲ್ಲಿ ಚಾಲಕರು ತಮ್ಮ ವೃತ್ತಿಯನ್ನು ಗೌರವಿಸಿದಂತೆ ಪ್ರತಿಯೊಬ್ಬ ಪ್ರಯಾಣಿಕರನ್ನು ಗೌರವಿಸಿದಾಗ ಮಾತ್ರ ಯಶಸ್ಸು ಕಾಣಬಹುದು ಎಂದು ತಿಳಿಸಿದರು.

ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಜಿಲ್ಲಾಧ್ಯಕ್ಷ ಹೆಚ್.ಕೆ.ಪ್ರಕಾಶ್ ಮಾತನಾಡಿ ಜಿಲ್ಲೆಯಾದ್ಯಂತ ಇರುವ ಟ್ಯಾಕ್ಸಿ ಚಾಲಕರನ್ನು ಮುಖಾಮುಖಿ ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಸಲಹೆ ಸಹಕಾರ ಪಡೆಯುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಅನಧಿಕೃತವಾಗಿ ಟ್ಯಾಕ್ಸಿ ನಿಲ್ದಾಣಗಳಲ್ಲಿ ಬಿಳಿ ಬೋರ್ಡ್ನ ಹಲವಾರು ಟ್ಯಾಕ್ಸಿಗಳು ಸಂಚರಿಸುತ್ತಿದ್ದು ಇದರಿಂದ ಹಳದಿ ಬೋರ್ಡಿನ ಟ್ಯಾಕ್ಸಿ ಚಾಲಕರಿಗೆ ತೀವ್ರ ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ವಾಗಿಲ್ಲ. ಈ ವಿರುದ್ಧ ಚಾಲಕರ ಸಭೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.ಇದೇ ವೇಳೆ ಕರ್ನಾಟಕ ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಸಂಸ್ಥೆ ಏಳು ಮಂದಿ ಟ್ಯಾಕ್ಸಿ ಚಾಲಕರು ಸೇರ್ಪಡೆಗೊಂಡರು.

ಇದನ್ನೂ ಓದಿ :

ಈ ಸಂದರ್ಭದಲ್ಲಿ ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಸಭಾಧ್ಯಕ್ಷ ಸುನೀಲ್, ಗೌರವಾಧ್ಯಕ್ಷ ರಾಜೇಶ್ ಮರಸಣಿಗೆ, ಪ್ರಧಾನ ಕಾರ್ಯದರ್ಶಿ ಇ.ಗಿರೀಶ್, ಸಹ ಕಾರ್ಯದರ್ಶಿ ಕಡೂರು ಸಂತೋಷ್, ಖಜಾಂಚಿ ಪ್ರದೀಪ್, ಸಹ ಖಜಾಂಚಿ ಹರೀಶ್ ಸದಸ್ಯರುಗಳಾದ ರವಿ ಬಸರಿಕಟ್ಟೆ, ಸುಂದ್ರೇಶ್, ಫಿಲಿಕ್ಸ್ ಪಿಂಟೋ, ವಿನೋದ್, ಯಶು, ಕಾಂತರಾಜು, ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

19 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

19 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

19 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

20 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

20 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago