Featured

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ – vishwanews24

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿಗೆ  ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು  ತೆರಳುತ್ತಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ  ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ  ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್​ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್​ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಪ್ಲಾಸ್ಟಿಕ್​ ಬಳಕೆಯನ್ನು ಸರ್ಕಾರ ಸಂಪೂರ್ಣ ನಿಷೇಧಿಸಿದೆ.

ಪ್ಲಾಸ್ಟಿಕ್ ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಚೆಕ್​​​ಪೋಸ್ಟ್​​ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಒಂದು ವೇಳೆ ಪ್ಲಾಸ್ಟಿಕ್​​​ ವಸ್ತುಗಳು ಸಿಕ್ಕರೆ ಸೀಜ್​​ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ, ಪ್ರವಾಸಿತಾಣಗಳನ್ನ ರಕ್ಷಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ಕ್ರಮವನ್ನು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಳೆಗಾಲ ಆರಂಭವಾಗಿದ್ದರಿಂದ ವೀಕೆಂಡ್​​ನಲ್ಲಿ ಹೆಚ್ಚಿನ ಜನರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುತ್ತಾರೆ. ಅಲ್ಲಿನ ಮುಳ್ಳಯ್ಯನಗಿರಿ, ಎತ್ತಿನ ಭುಜ ಶಿಖರದಲ್ಲಿ ಚಾರಣಕ್ಕೆ ತೆರಳುತ್ತಾರೆ. ಹೀಗೆ ತೆರಳುವವರು ಕೆಲವೊಂದು ಸಾರಿ ಅಡ್ಡಾದಿಡ್ಡಿ ವಾಹನ ಪಾರ್ಕ್​ ಮಾಡುತ್ತಾರೆ. ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುವವದರಿಂದ ಘಟ್ಟಗಳ ರಸ್ತೆ ಚಿಕ್ಕದಾಗಿರುವುದರಿಂದ ಕಿಮೀ ಗಟ್ಟಲೆ ಟ್ರಾಫಿಕ್ ​ಜಾಮ್​ ಉಂಟಾಗುತ್ತದೆ.

ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಪರದಾಡುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪರ್ವತಕ್ಕೆ ‌ತೆರಳುವ ರಸ್ತೆಯಲ್ಲಿದ್ದ ಕೈಮರ ಚೆಕ್​ಪೋಸ್ಟ್​​ನ್ನು N,M,D,C ಗ್ರಾಮಕ್ಕೆ ಬದಲಾವಣೆ ಮಾಡಿದ್ದು, ಅಲ್ಲಿನ ಸ್ಥಳೀಯರು ಪ್ರವಾಸಿಗರ ಕಿರುಚಾಟ ಕೂಗಾಟದ ಜೊತೆ ಮೋಜು ಮಸ್ತಿಯಿಂದ ತೊಂದರೆ ಆಗುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ಸಾವಿರಾರು ಪ್ರವಾಸಿಗರಿಂದ ಸದಾ ಗಿಜುಗುಡುವ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮುಳ್ಳಯ್ಯನಗಿರಿ, ಮೂಡಿಗೆರೆ ತಾಲೂಕಿನ ಬೈರಾಪುರ ಬಳಿಯ ಎತ್ತಿನಭುಜಕ್ಕೆ ಇದೀಗ ಪ್ರವಾಸಿಗರು ಹಾಗೂ ಚಾರಣಿಗರು ಬರದಂತೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿರುವ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ವಿಹಂಗಮವಾಗಿ ನಿಂತಿರುವ ಶಿಖರವೇ ಎತ್ತಿನ ಭುಜ. ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅನ್ನದೆ ವರ್ಷವಿಡೀ ಪ್ರವಾಸಿಗರಿಂದ ತುಂಬಿ ತುಳುಕುವ ಶಿಖರವಿದು. ಕಳೆದ ಒಂದು ತಿಂಗಳಿಂದ ಎತ್ತಿನಭುಜ ಶಿಖರದ ಸೌಂದರ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸಿ ಹೋಗಿದ್ದಾರೆ.

ಕೇವಲ‌ ಸೌಂದರ್ಯ ಸವಿಯುವದರ ಜೊತೆಗೆ ಇಲ್ಲಿ ಹುಚ್ಚಾಟವಾಡಿ, ಪ್ರಕೃತಿಯ ಒಡಲನ್ನೇ ಹಾಳು ಮಾಡುತ್ತಿದ್ದಾರೆ. ಇವೆಲ್ಲವೂ ಕೂಡ ಸ್ಥಳೀಯರು ಹಾಗೂ ಪ್ರಕೃತಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ. ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜಕ್ಕೆ ಪ್ರವಾಸಿಗರು ಆಗಮಿಸುವುದನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

21 hours ago