Featured

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ – vishwanews24

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿಗೆ  ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು  ತೆರಳುತ್ತಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ  ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ  ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್​ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್​ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಪ್ಲಾಸ್ಟಿಕ್​ ಬಳಕೆಯನ್ನು ಸರ್ಕಾರ ಸಂಪೂರ್ಣ ನಿಷೇಧಿಸಿದೆ.

ಪ್ಲಾಸ್ಟಿಕ್ ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಚೆಕ್​​​ಪೋಸ್ಟ್​​ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಒಂದು ವೇಳೆ ಪ್ಲಾಸ್ಟಿಕ್​​​ ವಸ್ತುಗಳು ಸಿಕ್ಕರೆ ಸೀಜ್​​ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ, ಪ್ರವಾಸಿತಾಣಗಳನ್ನ ರಕ್ಷಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ಕ್ರಮವನ್ನು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಳೆಗಾಲ ಆರಂಭವಾಗಿದ್ದರಿಂದ ವೀಕೆಂಡ್​​ನಲ್ಲಿ ಹೆಚ್ಚಿನ ಜನರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುತ್ತಾರೆ. ಅಲ್ಲಿನ ಮುಳ್ಳಯ್ಯನಗಿರಿ, ಎತ್ತಿನ ಭುಜ ಶಿಖರದಲ್ಲಿ ಚಾರಣಕ್ಕೆ ತೆರಳುತ್ತಾರೆ. ಹೀಗೆ ತೆರಳುವವರು ಕೆಲವೊಂದು ಸಾರಿ ಅಡ್ಡಾದಿಡ್ಡಿ ವಾಹನ ಪಾರ್ಕ್​ ಮಾಡುತ್ತಾರೆ. ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುವವದರಿಂದ ಘಟ್ಟಗಳ ರಸ್ತೆ ಚಿಕ್ಕದಾಗಿರುವುದರಿಂದ ಕಿಮೀ ಗಟ್ಟಲೆ ಟ್ರಾಫಿಕ್ ​ಜಾಮ್​ ಉಂಟಾಗುತ್ತದೆ.

ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಪರದಾಡುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪರ್ವತಕ್ಕೆ ‌ತೆರಳುವ ರಸ್ತೆಯಲ್ಲಿದ್ದ ಕೈಮರ ಚೆಕ್​ಪೋಸ್ಟ್​​ನ್ನು N,M,D,C ಗ್ರಾಮಕ್ಕೆ ಬದಲಾವಣೆ ಮಾಡಿದ್ದು, ಅಲ್ಲಿನ ಸ್ಥಳೀಯರು ಪ್ರವಾಸಿಗರ ಕಿರುಚಾಟ ಕೂಗಾಟದ ಜೊತೆ ಮೋಜು ಮಸ್ತಿಯಿಂದ ತೊಂದರೆ ಆಗುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ಸಾವಿರಾರು ಪ್ರವಾಸಿಗರಿಂದ ಸದಾ ಗಿಜುಗುಡುವ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮುಳ್ಳಯ್ಯನಗಿರಿ, ಮೂಡಿಗೆರೆ ತಾಲೂಕಿನ ಬೈರಾಪುರ ಬಳಿಯ ಎತ್ತಿನಭುಜಕ್ಕೆ ಇದೀಗ ಪ್ರವಾಸಿಗರು ಹಾಗೂ ಚಾರಣಿಗರು ಬರದಂತೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿರುವ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ವಿಹಂಗಮವಾಗಿ ನಿಂತಿರುವ ಶಿಖರವೇ ಎತ್ತಿನ ಭುಜ. ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅನ್ನದೆ ವರ್ಷವಿಡೀ ಪ್ರವಾಸಿಗರಿಂದ ತುಂಬಿ ತುಳುಕುವ ಶಿಖರವಿದು. ಕಳೆದ ಒಂದು ತಿಂಗಳಿಂದ ಎತ್ತಿನಭುಜ ಶಿಖರದ ಸೌಂದರ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸಿ ಹೋಗಿದ್ದಾರೆ.

ಕೇವಲ‌ ಸೌಂದರ್ಯ ಸವಿಯುವದರ ಜೊತೆಗೆ ಇಲ್ಲಿ ಹುಚ್ಚಾಟವಾಡಿ, ಪ್ರಕೃತಿಯ ಒಡಲನ್ನೇ ಹಾಳು ಮಾಡುತ್ತಿದ್ದಾರೆ. ಇವೆಲ್ಲವೂ ಕೂಡ ಸ್ಥಳೀಯರು ಹಾಗೂ ಪ್ರಕೃತಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ. ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜಕ್ಕೆ ಪ್ರವಾಸಿಗರು ಆಗಮಿಸುವುದನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

13 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago