Featured

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ – vishwanews24

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿಗೆ  ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು  ತೆರಳುತ್ತಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ  ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ  ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್​ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್​ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಪ್ಲಾಸ್ಟಿಕ್​ ಬಳಕೆಯನ್ನು ಸರ್ಕಾರ ಸಂಪೂರ್ಣ ನಿಷೇಧಿಸಿದೆ.

ಪ್ಲಾಸ್ಟಿಕ್ ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಚೆಕ್​​​ಪೋಸ್ಟ್​​ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಒಂದು ವೇಳೆ ಪ್ಲಾಸ್ಟಿಕ್​​​ ವಸ್ತುಗಳು ಸಿಕ್ಕರೆ ಸೀಜ್​​ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ, ಪ್ರವಾಸಿತಾಣಗಳನ್ನ ರಕ್ಷಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ಕ್ರಮವನ್ನು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಳೆಗಾಲ ಆರಂಭವಾಗಿದ್ದರಿಂದ ವೀಕೆಂಡ್​​ನಲ್ಲಿ ಹೆಚ್ಚಿನ ಜನರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುತ್ತಾರೆ. ಅಲ್ಲಿನ ಮುಳ್ಳಯ್ಯನಗಿರಿ, ಎತ್ತಿನ ಭುಜ ಶಿಖರದಲ್ಲಿ ಚಾರಣಕ್ಕೆ ತೆರಳುತ್ತಾರೆ. ಹೀಗೆ ತೆರಳುವವರು ಕೆಲವೊಂದು ಸಾರಿ ಅಡ್ಡಾದಿಡ್ಡಿ ವಾಹನ ಪಾರ್ಕ್​ ಮಾಡುತ್ತಾರೆ. ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುವವದರಿಂದ ಘಟ್ಟಗಳ ರಸ್ತೆ ಚಿಕ್ಕದಾಗಿರುವುದರಿಂದ ಕಿಮೀ ಗಟ್ಟಲೆ ಟ್ರಾಫಿಕ್ ​ಜಾಮ್​ ಉಂಟಾಗುತ್ತದೆ.

ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಪರದಾಡುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪರ್ವತಕ್ಕೆ ‌ತೆರಳುವ ರಸ್ತೆಯಲ್ಲಿದ್ದ ಕೈಮರ ಚೆಕ್​ಪೋಸ್ಟ್​​ನ್ನು N,M,D,C ಗ್ರಾಮಕ್ಕೆ ಬದಲಾವಣೆ ಮಾಡಿದ್ದು, ಅಲ್ಲಿನ ಸ್ಥಳೀಯರು ಪ್ರವಾಸಿಗರ ಕಿರುಚಾಟ ಕೂಗಾಟದ ಜೊತೆ ಮೋಜು ಮಸ್ತಿಯಿಂದ ತೊಂದರೆ ಆಗುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ಸಾವಿರಾರು ಪ್ರವಾಸಿಗರಿಂದ ಸದಾ ಗಿಜುಗುಡುವ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮುಳ್ಳಯ್ಯನಗಿರಿ, ಮೂಡಿಗೆರೆ ತಾಲೂಕಿನ ಬೈರಾಪುರ ಬಳಿಯ ಎತ್ತಿನಭುಜಕ್ಕೆ ಇದೀಗ ಪ್ರವಾಸಿಗರು ಹಾಗೂ ಚಾರಣಿಗರು ಬರದಂತೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿರುವ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ವಿಹಂಗಮವಾಗಿ ನಿಂತಿರುವ ಶಿಖರವೇ ಎತ್ತಿನ ಭುಜ. ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅನ್ನದೆ ವರ್ಷವಿಡೀ ಪ್ರವಾಸಿಗರಿಂದ ತುಂಬಿ ತುಳುಕುವ ಶಿಖರವಿದು. ಕಳೆದ ಒಂದು ತಿಂಗಳಿಂದ ಎತ್ತಿನಭುಜ ಶಿಖರದ ಸೌಂದರ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸಿ ಹೋಗಿದ್ದಾರೆ.

ಕೇವಲ‌ ಸೌಂದರ್ಯ ಸವಿಯುವದರ ಜೊತೆಗೆ ಇಲ್ಲಿ ಹುಚ್ಚಾಟವಾಡಿ, ಪ್ರಕೃತಿಯ ಒಡಲನ್ನೇ ಹಾಳು ಮಾಡುತ್ತಿದ್ದಾರೆ. ಇವೆಲ್ಲವೂ ಕೂಡ ಸ್ಥಳೀಯರು ಹಾಗೂ ಪ್ರಕೃತಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ. ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜಕ್ಕೆ ಪ್ರವಾಸಿಗರು ಆಗಮಿಸುವುದನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago