Featured

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ – Vishwanews24

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ

ಚಿಕ್ಕಮಗಳೂರು: ರಾಜ್ಯದಲ್ಲಿ ನಿರಂತರವಾಗಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಮಳೆ ವ್ಯಾಪಕವಾಗಿದೆ. ಹೀಗಾಗಿ ಅವಾಂತರ ಸೃಷ್ಟಿಯಾಗಿದ್ದು, ಮೃತವ್ಯಕ್ತಿಯ ಶವವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಎರಡು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿರುವಂತಹ ಕಡೂರು ತಾಲೂಕಿನ ಎಸ್.ಬೊಮ್ಮೇನಹಳ್ಳಿಯಲ್ಲಿ ನಡೆದಿದೆ.

ಪ್ರಮೋದ್‌ ಎಂಬಾತ ಮೃತಪಟ್ಟಿದ್ದ. ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಜನ ಪರದಾಡಿದ್ದು, ಎರಡು ದಿನಗಳ ಬಳಿಕ ಅಂತ್ಯಸಂಸ್ಕಾರ ಮಾಡಿದ್ದಾರೆ. ಕಡೂರು ತಾಲೂಕಿನ ಚಿಕ್ಕ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಬೊಮ್ಮನಹಳ್ಳಿಯಲ್ಲಿ ಬಹಳ ವರ್ಷಗಳ ನಂತರ ದೇವನೂರು ಕೆರೆ ತುಂಬಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು. ಹೀಗಾಗಿ ಈ ಗ್ರಾಮದಿಂದ ಸ್ಮಶಾನಕ್ಕೆ ಹೋಗುವ ದಾರಿ ಕೂಡ ನೀರಿನಿಂದ ಜಲಾವೃತವಾಗಿದ್ದು, ಮೃತದೇಹ ಕೊಂಡೊಯ್ಯಲು ಸಾಧ್ಯವಾಗದಿರುವುದರಿಂದ ಎರಡು ದಿನಗಳ ಕಾಲ ಶವವಿಟ್ಟು ಕಾದಿದ್ದಾರೆ.

ಎರಡು ದಿನದ ಬಳಿಕ ನೀರು ಸ್ವಲ್ಪ ಕಡಿಮೆಯಾದ ನಂತರ ನೀರಲ್ಲೇ ಶವವನ್ನು ಸ್ಮಶಾನಕ್ಕೆ ಗ್ರಾಮಸ್ಥರು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಶವಸಂಸ್ಕಾರ ಮಾಡಲು ಗ್ರಾಮಸ್ಥರು ಪರದಾಡಿದ್ದಾರೆ. ಬಳಿಕ ಸ್ವಲ್ಪ ಎತ್ತರದ ಭಾಗದಲ್ಲಿ ಗುಂಡಿ ತೆಗೆದು ಅಲ್ಲಿ ಮೃತರ ಅಂತ್ಯಕ್ರಿಯೆ ಮಾಡಲಾಗಿದೆ.

ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ .. ಸಂಜೆ 5 ಗಂಟೆಗೆ ಸ್ವಗ್ರಾಮ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago